BREAKING NEWS

ವಿವಾದಾತ್ಮಕ ಹೇಳಿಕೆ ನೀಡಿಲ್ಲ : ಜಿ ಪರಮೇಶ್ವರ್ ಸ್ಪಷ್ಟನೆ

ತುಮಕೂರು : ಹಿಂದೂ ಧರ್ಮದ ಕುರಿತು ನೀಡಿದ್ದ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸಚಿವ ಜಿ ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ. ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು,ನಾನು ಧರ್ಮಗಳ ನಡುವಿನ ವ್ಯತ್ಯಾಸಗಳ ಬಗ್ಗೆ ಪ್ರಸ್ತಾಪಿಸಿದ್ದೆ. ಜೈನ ಧರ್ಮ, ಬೌದ್ಧ ಧರ್ಮ, ಹಿಂದೂ ಧರ್ಮದ ಬಗ್ಗೆ ಹೇಳಿದ್ದೆ. ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿರಲಿಲ್ಲ ಎಂದು ತಿಳಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ನಮಗಿರುವಷ್ಟು ಅಭಿಮಾನ ಅವರಿಗೆ ಇಲ್ಲ. ಕೇವಲ ತೋರಿಕೆ, ಪ್ರಚಾರಕ್ಕಾಗಿ ಮಾತ್ರ ಹಿಂದೂ ಎನ್ನುತ್ತಾರೆ. ನಮ್ಮ ಹೇಳಿಕೆಯಲ್ಲಿ ಯಾವುದೇ ವಿವಾದವಿಲ್ಲ, ತಪ್ಪು ಹೇಳಿಕೆ ನೀಡಿಲ್ಲ. ರಾಜಕೀಯ ಕಾರಣಕ್ಕೆ ವಿರೋಧಿಸಿದರೆ ಉತ್ತರ ನೀಡುತ್ತೇನೆ. ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ನನ್ನ ಪ್ರಕಾರ, ನಾನು ನೀಡಿರುವ ಹೇಳಿಕೆಯಲ್ಲಿ ಯಾವುದೇ ವಿವಾದಾತ್ಮಕ ಅಂಶವಿಲ್ಲ. ಅವರು ರಾಜಕೀಯ ಕಾರಣಕ್ಕೆ ವಿವಾದ ಮಾಡಿದರೆ ಸಂದರ್ಭ ಬಂದಾಗ ಉತ್ತರ ಕೊಡುತ್ತೇನೆ. ಭಗವದ್ಗೀತೆ ಶ್ಲೋಕ ಯಾಕೆ ಹೇಳಿದೆ ನಾನು? ನನಗೆ ಹಿಂದೂ ಧರ್ಮದಲ್ಲಿ ಇರುವಷ್ಟು ನಂಬಿಕೆ, ನಾನು ಮಾಡುವಷ್ಟು ಆಚರಣೆ ಅವರಿಗಂತೂ ಇಲ್ಲ. ನನಗಿಂತ ಹೆಚ್ಚೇನೂ ಬಿಜೆಪಿಯವರು ಆಚರಣೆ ಮಾಡುವುದಿಲ್ಲ. ನಾನು ಕೇವಲ ಹೋಲಿಕೆ ಮಾಡಿ ಮಾತನಾಡಿದ್ದೇನೆ ಅಷ್ಟೇ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

lokesh

Recent Posts

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

28 mins ago

ಮಧ್ಯಪ್ರಾಚ್ಯ ಯುದ್ಧ ಮತ್ತೆ ಉಲ್ಬಣ: ಹಾರ್ಮುಜ್‌ ಜಲಸಂಧಿ ಬಂದ್‌ ಮಾಡಿದ ಇರಾನ್‌

ಟೆಹರಾನ್:‌ ಇರಾನ್‌, ಅಮೇರಿಕಾ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ…

1 hour ago

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

3 hours ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

3 hours ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

3 hours ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

6 hours ago