BREAKING NEWS

‘ದ್ರಾವಿಡ ಸಿದ್ಧಾಂತಗಳ ನಿರ್ಮೂಲನೆ’ ಕುರಿತ ಸಮಾವೇಶ: ಅನುಮತಿ ನಿರಾಕರಿಸಿದ ಮದ್ರಾಸ್‌ ಹೈಕೋರ್ಟ್‌

ಚೆನ್ನೈ : ದ್ರಾವಿಡ ಸಿದ್ಧಾಂತವನ್ನು ನಿರ್ಮೂಲನೆ ಕುರಿತಾದ ಸಮಾವೇಶವೊಂದನ್ನು ನಡೆಸಲು ಮದ್ರಾಸ್‌ ಹೈಕೋರ್ಟ್‌ ಅನುಮತಿ ನಿರಾಕರಿಸಿದೆ. ಬಹು-ನಂಬಿಕೆ ವ್ಯವಸ್ಥೆಯ ಸಹ-ಅಸ್ತಿತ್ವವು ಭಾರತದ ಅಸ್ಮಿತೆಯ ಭಾಗವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಯಾರಿಗೂ ಯಾವುದೇ ಸಿದ್ಧಾಂತವನ್ನು ನಿರ್ಮೂಲನೆಗೈಯ್ಯುವ ಸಭೆ ನಡೆಸುವ ಹಕ್ಕಿಲ್ಲ ಎಂದು ತಮ್ಮ ಆದೇಶದಲ್ಲಿ ನ್ಯಾಯಮೂರ್ತಿ ಜಿ ಜಯಚಂದ್ರನ್‌ ಹೇಳಿದ್ದಾರೆ.

“ದ್ರಾವಿಡ ಸಿದ್ಧಾಂತಗಳು ಮತ್ತು ಇತರ ಸಾಮಾಜಿಕ ಸಮಸ್ಯೆಗಳು” ಎಂಬ ಕುರಿತ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕೆಂದು ಕೋರಿ ಮಗೇಶ್‌ ಕಾರ್ತಿಕೇಯನ್‌ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯ ಮೇಲಿನ ಆದೇಶ ಹೊರಡಿಸಿದೆ.

“ಸನಾತನ ಧರ್ಮದ ನಿರ್ಮೂಲನೆ” ಕುರಿತ ಸಮಾವೇಶದಲ್ಲಿ ಪ್ರಚೋದನಾತ್ಮಕ ಭಾಷಣಗಳನ್ನು ಮಾಡಿದ ಆಡಳಿತ ಡಿಎಂಕೆಯ ಸದಸ್ಯರ ವಿರುದ್ಧ ತಮಿಳುನಾಡು ಪೊಲೀಸರೇಕೆ ಕ್ರಮಕೈಗೊಂಡಿರಲಿಲ್ಲ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಅಧಿಕಾರದಲ್ಲಿರುವವರು ಜನರನ್ನು ಸಿದ್ಧಾಂತ, ಜಾತಿ, ಧರ್ಮಗಳ ಆಧಾರದಲ್ಲಿ ವಿಭಜಿಸುವ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರಿಂದ ದೂರ ಉಳಿದು ಮದ್ಯಪಾನ, ಭ್ರಷ್ಟಾಚಾರ, ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಪ್ರಯತ್ನಿಸಬೇಕು ಎಂದು ನ್ಯಾಯಾಧೀಶರು ಹೇಳಿದರು.

ಅರ್ಜಿದಾರರ ಮನವಿಗೆ ಒಪ್ಪಿದಲ್ಲಿ ಅದು ಶಾಂತಿ ಇನ್ನಷ್ಟು ಹದಗೆಡಲು ಕಾರಣವಾಗಬಹುದು ಎಂದು ನ್ಯಾಯಾಲಯ ಹೇಳಿದೆ.

ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾದಂತೆ, ಅದನ್ನು ನಿರ್ಮೂಲನೆ ಮಾಡಬೇಕೆಂದು ಸಿಎಂ ಎಂ.ಕೆ. ಸ್ಟ್ಯಾಲಿನ್‌ ಅವರ ಪುತ್ರ ಸಚಿವ ಉದಯನಿಧಿ ಸ್ಟ್ಯಾಲಿನ್‌ ಹೇಳಿದ್ದು ವಿವಾದಕ್ಕೀಡಾಗಿತ್ತ.

andolanait

Recent Posts

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

5 mins ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

35 mins ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

54 mins ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

2 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

4 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

6 hours ago