BREAKING NEWS

‘ದ್ರಾವಿಡ ಸಿದ್ಧಾಂತಗಳ ನಿರ್ಮೂಲನೆ’ ಕುರಿತ ಸಮಾವೇಶ: ಅನುಮತಿ ನಿರಾಕರಿಸಿದ ಮದ್ರಾಸ್‌ ಹೈಕೋರ್ಟ್‌

ಚೆನ್ನೈ : ದ್ರಾವಿಡ ಸಿದ್ಧಾಂತವನ್ನು ನಿರ್ಮೂಲನೆ ಕುರಿತಾದ ಸಮಾವೇಶವೊಂದನ್ನು ನಡೆಸಲು ಮದ್ರಾಸ್‌ ಹೈಕೋರ್ಟ್‌ ಅನುಮತಿ ನಿರಾಕರಿಸಿದೆ. ಬಹು-ನಂಬಿಕೆ ವ್ಯವಸ್ಥೆಯ ಸಹ-ಅಸ್ತಿತ್ವವು ಭಾರತದ ಅಸ್ಮಿತೆಯ ಭಾಗವಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಯಾರಿಗೂ ಯಾವುದೇ ಸಿದ್ಧಾಂತವನ್ನು ನಿರ್ಮೂಲನೆಗೈಯ್ಯುವ ಸಭೆ ನಡೆಸುವ ಹಕ್ಕಿಲ್ಲ ಎಂದು ತಮ್ಮ ಆದೇಶದಲ್ಲಿ ನ್ಯಾಯಮೂರ್ತಿ ಜಿ ಜಯಚಂದ್ರನ್‌ ಹೇಳಿದ್ದಾರೆ.

“ದ್ರಾವಿಡ ಸಿದ್ಧಾಂತಗಳು ಮತ್ತು ಇತರ ಸಾಮಾಜಿಕ ಸಮಸ್ಯೆಗಳು” ಎಂಬ ಕುರಿತ ಕಾರ್ಯಕ್ರಮಕ್ಕೆ ಅನುಮತಿ ನೀಡಬೇಕೆಂದು ಕೋರಿ ಮಗೇಶ್‌ ಕಾರ್ತಿಕೇಯನ್‌ ಎಂಬ ವ್ಯಕ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನ್ಯಾಯಾಲಯ ಮೇಲಿನ ಆದೇಶ ಹೊರಡಿಸಿದೆ.

“ಸನಾತನ ಧರ್ಮದ ನಿರ್ಮೂಲನೆ” ಕುರಿತ ಸಮಾವೇಶದಲ್ಲಿ ಪ್ರಚೋದನಾತ್ಮಕ ಭಾಷಣಗಳನ್ನು ಮಾಡಿದ ಆಡಳಿತ ಡಿಎಂಕೆಯ ಸದಸ್ಯರ ವಿರುದ್ಧ ತಮಿಳುನಾಡು ಪೊಲೀಸರೇಕೆ ಕ್ರಮಕೈಗೊಂಡಿರಲಿಲ್ಲ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಅಧಿಕಾರದಲ್ಲಿರುವವರು ಜನರನ್ನು ಸಿದ್ಧಾಂತ, ಜಾತಿ, ಧರ್ಮಗಳ ಆಧಾರದಲ್ಲಿ ವಿಭಜಿಸುವ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರಿಂದ ದೂರ ಉಳಿದು ಮದ್ಯಪಾನ, ಭ್ರಷ್ಟಾಚಾರ, ಅಸ್ಪೃಶ್ಯತೆ ಮತ್ತು ಇತರ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಪ್ರಯತ್ನಿಸಬೇಕು ಎಂದು ನ್ಯಾಯಾಧೀಶರು ಹೇಳಿದರು.

ಅರ್ಜಿದಾರರ ಮನವಿಗೆ ಒಪ್ಪಿದಲ್ಲಿ ಅದು ಶಾಂತಿ ಇನ್ನಷ್ಟು ಹದಗೆಡಲು ಕಾರಣವಾಗಬಹುದು ಎಂದು ನ್ಯಾಯಾಲಯ ಹೇಳಿದೆ.

ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾದಂತೆ, ಅದನ್ನು ನಿರ್ಮೂಲನೆ ಮಾಡಬೇಕೆಂದು ಸಿಎಂ ಎಂ.ಕೆ. ಸ್ಟ್ಯಾಲಿನ್‌ ಅವರ ಪುತ್ರ ಸಚಿವ ಉದಯನಿಧಿ ಸ್ಟ್ಯಾಲಿನ್‌ ಹೇಳಿದ್ದು ವಿವಾದಕ್ಕೀಡಾಗಿತ್ತ.

andolanait

Recent Posts

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

3 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

3 hours ago

ಭಾರತೀನಗರ: ಆರೋಗ್ಯ ಕೇಂದ್ರಕ್ಕೆ ಅನಾರೋಗ್ಯ!

ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ  ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…

4 hours ago

ದಕ್ಷ ಮತ್ತೆ ಪ್ರತ್ಯಕ್ಷ: ಸಾರ್ವಜನಿಕರಲ್ಲಿ ತಲ್ಲಣ

ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…

4 hours ago

ಇದು ಉದ್ಯಾನವಲ್ಲ: ಅನೈತಿಕ ಚಟುವಟಿಕೆಗಳ ತಾಣ

ಕೆ.ಎಸ್.ಚಂದ್ರಶೇಖರಮೂರ್ತಿ ರಾಮಕೃಷ್ಣ ನಗರದ ನಂದನವನ ಈಗ ಕುಡುಕರ ತಾಣ, ಬಯಲು ಶೌಚಾಲಯ ! ಮೈಸೂರು: ಸಾರ್ವಜನಿಕರಿಗೆ ವಿಶ್ರಾಂತಿಯ ತಾಣವಾಗಬೇಕಿದ್ದ ಉದ್ಯಾನವನ…

4 hours ago