BREAKING NEWS

ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗದಲ್ಲಿ ಮತಾಂತರಗಳು ನಡೆಯುತ್ತವೆ : ಕೇಂದ್ರ ಸಚಿವ ನಾರಾಯಣಸ್ವಾಮಿ ಆರೋಪ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಜಿಲ್ಲೆಯಲ್ಲಿ ಮತ್ತೆ ಮತಾಂತರದ ಕೂಗು ಕೇಳಿ ಬಂದಿದೆ. ಗೂಳಿಹಟ್ಟಿ ಶೇಖರ್ ಬಳಿಕ ಇದೀಗ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಈ ಬಗ್ಗೆ ಧ್ವನಿಯೆತ್ತಿದ್ದು, ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗದಲ್ಲಿ ಮತಾಂತರ ಪ್ರಕ್ರಿಯಗಳು ನಡೆಯುತ್ತದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆ ವಾಪಸಾತಿ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆಂಧ್ರಪ್ರದೇಶದಲ್ಲಿ ಶೇ.90ರಷ್ಟು ಮತ್ತು ತೆಲಂಗಾಣದಲ್ಲಿ ಶೇ.30ರಷ್ಟು ಮತಾಂತರ ಪ್ರಕ್ರಿಯೆ ನಡೆದಿದೆ. ಚಿತ್ರದುರ್ಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಮ್ಮ ಮಾದಿಗ ಸಮುದಾಯದ ಜನರನ್ನು ಮತಾಂತರಗೊಳಿಸಲಾಗುತ್ತಿದೆ. ಅವರ ಹಿಂದುಳಿದಿರುವಿಕೆ ಮತ್ತು ಬಡತನದ ದುರ್ಲಾಭ ಯಾವ ಮಟ್ಟಿಗೆ ನಡೆಯುತ್ತಿದೆಯೆಂದರೆ ಒಂದು ಬಿರಿಯಾನಿ ಕೊಟ್ಟರೂ ಸಾಕು ಜನ ಮತಾಂತರವಾಗುತ್ತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಉಲ್ಟಾ ಹೋಗುತ್ತದೆ : ಶೋಷಿತ ಜನರನ್ನೇ ಗುರಿ ಮಾಡಿ ಮತಾಂತರ ಮಾಡಲಾಗುತ್ತಿದೆ. ಮತಾಂತರದಿಂದ ಸಮಾಜದಲ್ಲಿ ಮುನ್ನೆಲೆಗೆ ಬರಲು ಸಾಧ್ಯವಿಲ್ಲ ಎಂಬುದು ತಿಳಿದೇ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ರಾಜ್ಯ ಸರಕಾರ ಮತಾಂತರ ನಿಷೇಧ ಕಾನೂನನ್ನು ಜಾರಿಗೆ ತಂದಿತ್ತು. ಈಗ ಕಾಂಗ್ರೆಸ್ ಇದರ ವಿರುದ್ಧ ಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಏಕರೂಪ ನಾಗರಿಕ ಸಂಹಿತೆನ್ನು ಮುಸ್ಲಿಮರೂ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆವ ಮೂಲಕ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ ನೀಡಿದ್ದ ಸಂವಿಧಾನ ವಿರೋಧಿ ಕಾರ್ಯವಾಗುತ್ತದೆ. ಸಂವಿಧಾನವೇ ಪರಮೋಚ್ಚ ಮತ್ತು ಎಲ್ಲಿರಿಂದಲೂ ಗೌರವಿಸಲ್ಪಡಬೇಕು ಎಂದು ಅಂಬೇಡ್ಕರ್ ಅವರು ಬಯಸಿದ್ದರು ಎಂದು ತಿಳಿಸಿದರು.

ಇನ್ನು ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದ ಕೇಂದ್ರ. ರಾಜ್ಯದಲ್ಲಿ ನೀತಿಯಿಲ್ಲದ ಇಂತಹ ದೊಡ್ಡ ದೊಡ್ಡ ಭರವಸೆಗಳನ್ನು ನೀಡುವ ಮೂಲಕವೇ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇದೀಗ ಸರ್ಕಾರ ನೀಡಿದ ಭರವಸೆಯಂತೆ ನಾಗರಿಕರಿಗೆ ಉಚಿತ ಅಕ್ಕಿ ನೀಡಬೇಕು ಎಂದು ಹೇಳಿದರು.

ಇದೇವೇಳೆ ರಾಜ್ಯಕ್ಕೆ ಅಕ್ಕಿ ಒದಗಿಸಲಿಲ್ಲ ಎಂದು ಕೇಂದ್ರವನ್ನು ದೂರುವುದು ಸರಿಯಲ್ಲ ಎಂದು ಕುಟುಕಿದರು. ದಾಸ್ತಾನು ಮತ್ತು ಉತ್ಪನ್ನಗಳ ಲಭ್ಯತೆಯ ಆಧಾರದ ಮೇಲೆ ಕೇಂದ್ರ ಸರಕಾರವು ಅಕ್ಕಿಯನ್ನು ಪೂರೈಸಲು ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಸರಕಾರಿ ಬಸ್ ಗಳಿಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕರ ಪಾಲಿನ ಕೆಂಪು ಬಸ್ ನಿಂದ ಸಾಕಷ್ಟು ಮಕ್ಕಳು, ತಾಯಂದಿರು ಬಿದ್ದಿರುವ ಘಟನೆಗಳು ವರದಿಯಾಗಿವೆ. ಇನ್ನು ಈ ಯೋಜನೆ ಜಾರಿಗೆ ಬಂದ ಮೇಲೆ ಬಸ್ ಚಾಲಕರು ಮತ್ತು ನಿರ್ವಾಹಕರೊಂದಿಗೆ ಜಗಳವಾಡುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ.

ಸರ್ಕಾರಿ ಬಸ್‌ಗಳಲ್ಲಿ ಜನ ತುಂಬಿ ತುಳುಕುತ್ತಿದ್ದು ಆದರ ಅದರ ಸಾಮರ್ಥ್ಯದ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ. ಆದರೆ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ರಸ್ತೆಗಳ ಸ್ಥಿತಿ ಮತ್ತು ಪರಿಸ್ಥಿತಿಯನ್ನು ಯಾರೂ ಕಂಡಿಲ್ಲ, ಬಸ್ ಚಾಲಕರು ಮತ್ತು ಕಂಡಕ್ಟರ್‌ಗಳಿಗೆ ಭದ್ರತೆ ಇಲ್ಲ. ಮೇಲಾಗಿ, ಅಲ್ಲಿ ಬಸ್‌ಗಳ ಸ್ಥಿತಿಗತಿಗಳ ಬಗ್ಗೆ ಯಾವುದೇ ತಪಾಸಣೆ ನಡೆದಿಲ್ಲ, ಎಂದು ಆರೋಪಿಸಿದರು.

‘ಗರೀಬಿ ಹಠಾವೋ’ ಘೋಷಣೆಯನ್ನು ಕಾಂಗ್ರೆಸ್ ಬಹಳ ಹಿಂದೆಯೇ ಮಾಡಿತ್ತು. ಆದರೆ ಘೋಷಣೆಯಾದ ಹಲವು ವರ್ಷಗಳ ನಂತರವೂ ಜನ ಮಾತ್ರ ಬಡವರಾಗಿಯೇ ಉಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

lokesh

Recent Posts

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…

50 seconds ago

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

2 hours ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

2 hours ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

3 hours ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

3 hours ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

7 hours ago