BREAKING NEWS

ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗದಲ್ಲಿ ಮತಾಂತರಗಳು ನಡೆಯುತ್ತವೆ : ಕೇಂದ್ರ ಸಚಿವ ನಾರಾಯಣಸ್ವಾಮಿ ಆರೋಪ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಜಿಲ್ಲೆಯಲ್ಲಿ ಮತ್ತೆ ಮತಾಂತರದ ಕೂಗು ಕೇಳಿ ಬಂದಿದೆ. ಗೂಳಿಹಟ್ಟಿ ಶೇಖರ್ ಬಳಿಕ ಇದೀಗ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಈ ಬಗ್ಗೆ ಧ್ವನಿಯೆತ್ತಿದ್ದು, ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗದಲ್ಲಿ ಮತಾಂತರ ಪ್ರಕ್ರಿಯಗಳು ನಡೆಯುತ್ತದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆ ವಾಪಸಾತಿ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆಂಧ್ರಪ್ರದೇಶದಲ್ಲಿ ಶೇ.90ರಷ್ಟು ಮತ್ತು ತೆಲಂಗಾಣದಲ್ಲಿ ಶೇ.30ರಷ್ಟು ಮತಾಂತರ ಪ್ರಕ್ರಿಯೆ ನಡೆದಿದೆ. ಚಿತ್ರದುರ್ಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಮ್ಮ ಮಾದಿಗ ಸಮುದಾಯದ ಜನರನ್ನು ಮತಾಂತರಗೊಳಿಸಲಾಗುತ್ತಿದೆ. ಅವರ ಹಿಂದುಳಿದಿರುವಿಕೆ ಮತ್ತು ಬಡತನದ ದುರ್ಲಾಭ ಯಾವ ಮಟ್ಟಿಗೆ ನಡೆಯುತ್ತಿದೆಯೆಂದರೆ ಒಂದು ಬಿರಿಯಾನಿ ಕೊಟ್ಟರೂ ಸಾಕು ಜನ ಮತಾಂತರವಾಗುತ್ತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಉಲ್ಟಾ ಹೋಗುತ್ತದೆ : ಶೋಷಿತ ಜನರನ್ನೇ ಗುರಿ ಮಾಡಿ ಮತಾಂತರ ಮಾಡಲಾಗುತ್ತಿದೆ. ಮತಾಂತರದಿಂದ ಸಮಾಜದಲ್ಲಿ ಮುನ್ನೆಲೆಗೆ ಬರಲು ಸಾಧ್ಯವಿಲ್ಲ ಎಂಬುದು ತಿಳಿದೇ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ರಾಜ್ಯ ಸರಕಾರ ಮತಾಂತರ ನಿಷೇಧ ಕಾನೂನನ್ನು ಜಾರಿಗೆ ತಂದಿತ್ತು. ಈಗ ಕಾಂಗ್ರೆಸ್ ಇದರ ವಿರುದ್ಧ ಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಏಕರೂಪ ನಾಗರಿಕ ಸಂಹಿತೆನ್ನು ಮುಸ್ಲಿಮರೂ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆವ ಮೂಲಕ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ ನೀಡಿದ್ದ ಸಂವಿಧಾನ ವಿರೋಧಿ ಕಾರ್ಯವಾಗುತ್ತದೆ. ಸಂವಿಧಾನವೇ ಪರಮೋಚ್ಚ ಮತ್ತು ಎಲ್ಲಿರಿಂದಲೂ ಗೌರವಿಸಲ್ಪಡಬೇಕು ಎಂದು ಅಂಬೇಡ್ಕರ್ ಅವರು ಬಯಸಿದ್ದರು ಎಂದು ತಿಳಿಸಿದರು.

ಇನ್ನು ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದ ಕೇಂದ್ರ. ರಾಜ್ಯದಲ್ಲಿ ನೀತಿಯಿಲ್ಲದ ಇಂತಹ ದೊಡ್ಡ ದೊಡ್ಡ ಭರವಸೆಗಳನ್ನು ನೀಡುವ ಮೂಲಕವೇ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇದೀಗ ಸರ್ಕಾರ ನೀಡಿದ ಭರವಸೆಯಂತೆ ನಾಗರಿಕರಿಗೆ ಉಚಿತ ಅಕ್ಕಿ ನೀಡಬೇಕು ಎಂದು ಹೇಳಿದರು.

ಇದೇವೇಳೆ ರಾಜ್ಯಕ್ಕೆ ಅಕ್ಕಿ ಒದಗಿಸಲಿಲ್ಲ ಎಂದು ಕೇಂದ್ರವನ್ನು ದೂರುವುದು ಸರಿಯಲ್ಲ ಎಂದು ಕುಟುಕಿದರು. ದಾಸ್ತಾನು ಮತ್ತು ಉತ್ಪನ್ನಗಳ ಲಭ್ಯತೆಯ ಆಧಾರದ ಮೇಲೆ ಕೇಂದ್ರ ಸರಕಾರವು ಅಕ್ಕಿಯನ್ನು ಪೂರೈಸಲು ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಸರಕಾರಿ ಬಸ್ ಗಳಿಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕರ ಪಾಲಿನ ಕೆಂಪು ಬಸ್ ನಿಂದ ಸಾಕಷ್ಟು ಮಕ್ಕಳು, ತಾಯಂದಿರು ಬಿದ್ದಿರುವ ಘಟನೆಗಳು ವರದಿಯಾಗಿವೆ. ಇನ್ನು ಈ ಯೋಜನೆ ಜಾರಿಗೆ ಬಂದ ಮೇಲೆ ಬಸ್ ಚಾಲಕರು ಮತ್ತು ನಿರ್ವಾಹಕರೊಂದಿಗೆ ಜಗಳವಾಡುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ.

ಸರ್ಕಾರಿ ಬಸ್‌ಗಳಲ್ಲಿ ಜನ ತುಂಬಿ ತುಳುಕುತ್ತಿದ್ದು ಆದರ ಅದರ ಸಾಮರ್ಥ್ಯದ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ. ಆದರೆ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ರಸ್ತೆಗಳ ಸ್ಥಿತಿ ಮತ್ತು ಪರಿಸ್ಥಿತಿಯನ್ನು ಯಾರೂ ಕಂಡಿಲ್ಲ, ಬಸ್ ಚಾಲಕರು ಮತ್ತು ಕಂಡಕ್ಟರ್‌ಗಳಿಗೆ ಭದ್ರತೆ ಇಲ್ಲ. ಮೇಲಾಗಿ, ಅಲ್ಲಿ ಬಸ್‌ಗಳ ಸ್ಥಿತಿಗತಿಗಳ ಬಗ್ಗೆ ಯಾವುದೇ ತಪಾಸಣೆ ನಡೆದಿಲ್ಲ, ಎಂದು ಆರೋಪಿಸಿದರು.

‘ಗರೀಬಿ ಹಠಾವೋ’ ಘೋಷಣೆಯನ್ನು ಕಾಂಗ್ರೆಸ್ ಬಹಳ ಹಿಂದೆಯೇ ಮಾಡಿತ್ತು. ಆದರೆ ಘೋಷಣೆಯಾದ ಹಲವು ವರ್ಷಗಳ ನಂತರವೂ ಜನ ಮಾತ್ರ ಬಡವರಾಗಿಯೇ ಉಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

lokesh

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

9 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

9 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

9 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

9 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

9 hours ago