BREAKING NEWS

ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗದಲ್ಲಿ ಮತಾಂತರಗಳು ನಡೆಯುತ್ತವೆ : ಕೇಂದ್ರ ಸಚಿವ ನಾರಾಯಣಸ್ವಾಮಿ ಆರೋಪ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಜಿಲ್ಲೆಯಲ್ಲಿ ಮತ್ತೆ ಮತಾಂತರದ ಕೂಗು ಕೇಳಿ ಬಂದಿದೆ. ಗೂಳಿಹಟ್ಟಿ ಶೇಖರ್ ಬಳಿಕ ಇದೀಗ ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಈ ಬಗ್ಗೆ ಧ್ವನಿಯೆತ್ತಿದ್ದು, ಕೇವಲ ಒಂದು ಬಿರಿಯಾನಿಗಾಗಿ ಚಿತ್ರದುರ್ಗದಲ್ಲಿ ಮತಾಂತರ ಪ್ರಕ್ರಿಯಗಳು ನಡೆಯುತ್ತದೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆ ವಾಪಸಾತಿ ಬಗ್ಗೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಆಂಧ್ರಪ್ರದೇಶದಲ್ಲಿ ಶೇ.90ರಷ್ಟು ಮತ್ತು ತೆಲಂಗಾಣದಲ್ಲಿ ಶೇ.30ರಷ್ಟು ಮತಾಂತರ ಪ್ರಕ್ರಿಯೆ ನಡೆದಿದೆ. ಚಿತ್ರದುರ್ಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಮ್ಮ ಮಾದಿಗ ಸಮುದಾಯದ ಜನರನ್ನು ಮತಾಂತರಗೊಳಿಸಲಾಗುತ್ತಿದೆ. ಅವರ ಹಿಂದುಳಿದಿರುವಿಕೆ ಮತ್ತು ಬಡತನದ ದುರ್ಲಾಭ ಯಾವ ಮಟ್ಟಿಗೆ ನಡೆಯುತ್ತಿದೆಯೆಂದರೆ ಒಂದು ಬಿರಿಯಾನಿ ಕೊಟ್ಟರೂ ಸಾಕು ಜನ ಮತಾಂತರವಾಗುತ್ತಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಉಲ್ಟಾ ಹೋಗುತ್ತದೆ : ಶೋಷಿತ ಜನರನ್ನೇ ಗುರಿ ಮಾಡಿ ಮತಾಂತರ ಮಾಡಲಾಗುತ್ತಿದೆ. ಮತಾಂತರದಿಂದ ಸಮಾಜದಲ್ಲಿ ಮುನ್ನೆಲೆಗೆ ಬರಲು ಸಾಧ್ಯವಿಲ್ಲ ಎಂಬುದು ತಿಳಿದೇ ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ರಾಜ್ಯ ಸರಕಾರ ಮತಾಂತರ ನಿಷೇಧ ಕಾನೂನನ್ನು ಜಾರಿಗೆ ತಂದಿತ್ತು. ಈಗ ಕಾಂಗ್ರೆಸ್ ಇದರ ವಿರುದ್ಧ ಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಏಕರೂಪ ನಾಗರಿಕ ಸಂಹಿತೆನ್ನು ಮುಸ್ಲಿಮರೂ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರವು ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆವ ಮೂಲಕ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ದೇಶಕ್ಕೆ ನೀಡಿದ್ದ ಸಂವಿಧಾನ ವಿರೋಧಿ ಕಾರ್ಯವಾಗುತ್ತದೆ. ಸಂವಿಧಾನವೇ ಪರಮೋಚ್ಚ ಮತ್ತು ಎಲ್ಲಿರಿಂದಲೂ ಗೌರವಿಸಲ್ಪಡಬೇಕು ಎಂದು ಅಂಬೇಡ್ಕರ್ ಅವರು ಬಯಸಿದ್ದರು ಎಂದು ತಿಳಿಸಿದರು.

ಇನ್ನು ಕಾಂಗ್ರೆಸ್ ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದ ಕೇಂದ್ರ. ರಾಜ್ಯದಲ್ಲಿ ನೀತಿಯಿಲ್ಲದ ಇಂತಹ ದೊಡ್ಡ ದೊಡ್ಡ ಭರವಸೆಗಳನ್ನು ನೀಡುವ ಮೂಲಕವೇ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಇದೀಗ ಸರ್ಕಾರ ನೀಡಿದ ಭರವಸೆಯಂತೆ ನಾಗರಿಕರಿಗೆ ಉಚಿತ ಅಕ್ಕಿ ನೀಡಬೇಕು ಎಂದು ಹೇಳಿದರು.

ಇದೇವೇಳೆ ರಾಜ್ಯಕ್ಕೆ ಅಕ್ಕಿ ಒದಗಿಸಲಿಲ್ಲ ಎಂದು ಕೇಂದ್ರವನ್ನು ದೂರುವುದು ಸರಿಯಲ್ಲ ಎಂದು ಕುಟುಕಿದರು. ದಾಸ್ತಾನು ಮತ್ತು ಉತ್ಪನ್ನಗಳ ಲಭ್ಯತೆಯ ಆಧಾರದ ಮೇಲೆ ಕೇಂದ್ರ ಸರಕಾರವು ಅಕ್ಕಿಯನ್ನು ಪೂರೈಸಲು ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

ಸರಕಾರಿ ಬಸ್ ಗಳಿಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕರ ಪಾಲಿನ ಕೆಂಪು ಬಸ್ ನಿಂದ ಸಾಕಷ್ಟು ಮಕ್ಕಳು, ತಾಯಂದಿರು ಬಿದ್ದಿರುವ ಘಟನೆಗಳು ವರದಿಯಾಗಿವೆ. ಇನ್ನು ಈ ಯೋಜನೆ ಜಾರಿಗೆ ಬಂದ ಮೇಲೆ ಬಸ್ ಚಾಲಕರು ಮತ್ತು ನಿರ್ವಾಹಕರೊಂದಿಗೆ ಜಗಳವಾಡುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ.

ಸರ್ಕಾರಿ ಬಸ್‌ಗಳಲ್ಲಿ ಜನ ತುಂಬಿ ತುಳುಕುತ್ತಿದ್ದು ಆದರ ಅದರ ಸಾಮರ್ಥ್ಯದ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ. ಆದರೆ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ರಸ್ತೆಗಳ ಸ್ಥಿತಿ ಮತ್ತು ಪರಿಸ್ಥಿತಿಯನ್ನು ಯಾರೂ ಕಂಡಿಲ್ಲ, ಬಸ್ ಚಾಲಕರು ಮತ್ತು ಕಂಡಕ್ಟರ್‌ಗಳಿಗೆ ಭದ್ರತೆ ಇಲ್ಲ. ಮೇಲಾಗಿ, ಅಲ್ಲಿ ಬಸ್‌ಗಳ ಸ್ಥಿತಿಗತಿಗಳ ಬಗ್ಗೆ ಯಾವುದೇ ತಪಾಸಣೆ ನಡೆದಿಲ್ಲ, ಎಂದು ಆರೋಪಿಸಿದರು.

‘ಗರೀಬಿ ಹಠಾವೋ’ ಘೋಷಣೆಯನ್ನು ಕಾಂಗ್ರೆಸ್ ಬಹಳ ಹಿಂದೆಯೇ ಮಾಡಿತ್ತು. ಆದರೆ ಘೋಷಣೆಯಾದ ಹಲವು ವರ್ಷಗಳ ನಂತರವೂ ಜನ ಮಾತ್ರ ಬಡವರಾಗಿಯೇ ಉಳಿದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

lokesh

Recent Posts

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

22 mins ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

6 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

6 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

7 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

7 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

23 hours ago