BREAKING NEWS

BJPಯಲ್ಲಿ ಲಿಂಗಾಯತರ ಮೂಲೆಗುಂಪು: ಬೊಮ್ಮಾಯಿ ಅವರಿಗೂ ಯಡಿಯೂರಪ್ಪ ಸ್ಥಿತಿ ಬರಲಿದೆ: ಎಂ.ಬಿ.ಪಾಟೀಲ್‌

ವಿಜಯಪುರ : ಬಿಜೆಪಿ ಲಿಂಗಾಯತ ನಾಯಕರಾದ ಯಡಿಯೂರಪ್ಪ ಮೂಲಕ ಆಪರೇಶನ್ ಕಮಲ ಮಾಡಿ, ಅವರಿಗೆ ಕೆಟ್ಟ ಹೆಸರು ತಂದು, ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಅವರನ್ನೇ ಮೂಲೆಗುಂಪು ಮಾಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಲಿಂಗಾಯತ ನಾಯಕರನ್ನು ಬಿಜೆಪಿ ದಮನ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ನಾಯಕರು ಬಿಜೆಪಿ ಪಕ್ಷದಲ್ಲಿನ ವಾತಾವರಣದಿಂದ ಗಾಬರಿಯಾಗಿದ್ದು, ಮರಳಿ ಕಾಂಗ್ರೆಸ್ ಮನೆಗೆ ಬರುತ್ತಿದ್ದಾರೆ. ಟಿಕೆಟ್ ವಂಚಿಸಿದ ಕಾರಣಕ್ಕೆ ಲಕ್ಷ್ಮಣ ಸವದಿ, ಜಗದೀಶ ಶಟ್ಟರ್ ಅವರಂಥ ಹಿರಿಯ ನಾಯಕರು ಪಕ್ಷದ ನಾಯಕತ್ವದ ವರ್ತನೆಯಿಂದ ಹೊರಬರುತ್ತಿದ್ದಾರೆ. ಯಡಿಯೂರಪ್ಪ, ಶಟ್ಟರ್ ಅವರಿಗಾದ ಗತಿಯೇ ಬೊಮ್ಮಾಯಿ ಅವರಿಗೂ ಆಗಲಿದೆ ಎಂದು ಎಚ್ಚರಿಸಿದರು.

ಬಿಜೆಪಿ ನಾಯಕರು ಕಾಂಗ್ರೆಸ್ ವೀರೇಂದ್ರ ಪಾಟೀಲ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಿತು ಎಂದು ದೂರುತ್ತಾರೆ. ಆದರೆ ಮುಖ್ಯಮಂತ್ರಿ ಆಗಿದ್ದ ವೀರೇಂದ್ರ ಪಾಟೀಲ ಅವರು ಅನಾರೋಗ್ಯ ಪೀಡಿತರಾದ ಕಾರಣ ಅವರನ್ನು ಬದಲಿಸಲಾಗಿತ್ತು. ಆದರೆ ಯಡಿಯೂರಪ್ಪ ಅವರಿಗೆ ಈಗಲೂ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಆದರೂ ಅವರನ್ನು ಅಗೌರವವಾಗಿ ನಡೆಸಿಕೊಳ್ಳಲಾಯಿತು ಎಂದು ಹರಿಹಾಯ್ದರು.

ಲಿಂಗಾಯತ ಸಮುದಾದ ಯಡಿಯೂರಪ್ಪ ಅವರನ್ನು ಪದಚ್ಯುತ ಮಾಡಿದ ಬಳಿಕ ಲಿಂಗಾಯತ ನಾಯಕರು, ವೀರಶೈವ ಮಹಾಸಭಾ ಸೇರಿದಂತೆ ವೀರಶೈವ ಸಮುದಾಯದ ಹಲವರು ಧ್ವನಿ ಎತ್ತಿದ್ದರಿಂದ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಬೊಮ್ಮಾಯಿ ಅವರು ಮರೆಯಬಾರದು.

ಕಾಂಗ್ರೆಸ್ ಶಾಸಕರು, ಪಕ್ಷ ಬಯಸಿದಲ್ಲಿ, ಹೈಕಮಾಂಡ ಒಪ್ಪಿದಲ್ಲಿ ನಾನು ಮುಖ್ಯಮಂತ್ರಿ ಆಗಬಲ್ಲೆ, ಸಮರ್ಥನೂ ಇದ್ದೇನೆ. ನಾನು ಮಾತ್ರವಲ್ಲ ದೇಶಪಾಂಡೆ, ಕೃಷ್ಣ ಭೈರೆಗೌಡ, ಪರಮೇಶ್ವರ ಹೀಗೆ ಹಲವರು ಮುಖ್ಯಮಂತ್ರಿ ಆಗುವ ಅರ್ಹತೆ ಜೊತೆ ಸಮರ್ಥರಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿ, ಇಂದಿರಾಗಾಂಧಿ, ರಾಜೀವ ಗಾಂಧಿ ಅವರಂಥ ನಾಯಕರು ಅಲಂಕರಿಸಿದ ಹುದ್ದೆಯಲ್ಲಿದ್ದಾರೆ. ಪ್ರಧಾನಮಂತ್ರಿ ಹುದ್ದೆಗೆ ಸಮರ್ಥರಾಗಿರುವ ಅವರನ್ನು ರಾಜ್ಯದ ಮುಖ್ಯಮಂತ್ರಿಯಂಥ ಸಣ್ಣ ಸ್ಥಾನಕ್ಕೆ ಪರಿಗಣಿಸಿ ಚರ್ಚಿಸುವುದು ಸರಿಯಲ್ಲ. ಇದರ ಹೊರತಾಗಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.

andolanait

Recent Posts

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

1 hour ago

ಕಳಾಹೀನವಾಗಿದೆ ರಾಜೀವ್ ನಗರದ ಈ ಉದ್ಯಾನ!

ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…

1 hour ago

ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್ ಕಾಟ

ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…

1 hour ago

ಕೊಡಗು ಜಿಲ್ಲೆಯಲ್ಲಿ ಪಡಿತರ ವಿತರಣೆಗೆ ಹತ್ತಾರು ಸಮಸ್ಯೆ

ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…

2 hours ago

3 ದಿನಗಳಲ್ಲಿ ಎಲ್ಲರ ಬಯೋಮೆಟ್ರಿಕ್ ಆಗುತ್ತಾ.?

ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ  ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…

2 hours ago

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

9 hours ago