BREAKING NEWS

BJPಯಲ್ಲಿ ಲಿಂಗಾಯತರ ಮೂಲೆಗುಂಪು: ಬೊಮ್ಮಾಯಿ ಅವರಿಗೂ ಯಡಿಯೂರಪ್ಪ ಸ್ಥಿತಿ ಬರಲಿದೆ: ಎಂ.ಬಿ.ಪಾಟೀಲ್‌

ವಿಜಯಪುರ : ಬಿಜೆಪಿ ಲಿಂಗಾಯತ ನಾಯಕರಾದ ಯಡಿಯೂರಪ್ಪ ಮೂಲಕ ಆಪರೇಶನ್ ಕಮಲ ಮಾಡಿ, ಅವರಿಗೆ ಕೆಟ್ಟ ಹೆಸರು ತಂದು, ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಅವರನ್ನೇ ಮೂಲೆಗುಂಪು ಮಾಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಲಿಂಗಾಯತ ನಾಯಕರನ್ನು ಬಿಜೆಪಿ ದಮನ ಮಾಡುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ವಾಗ್ದಾಳಿ ನಡೆಸಿದರು.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ನಾಯಕರು ಬಿಜೆಪಿ ಪಕ್ಷದಲ್ಲಿನ ವಾತಾವರಣದಿಂದ ಗಾಬರಿಯಾಗಿದ್ದು, ಮರಳಿ ಕಾಂಗ್ರೆಸ್ ಮನೆಗೆ ಬರುತ್ತಿದ್ದಾರೆ. ಟಿಕೆಟ್ ವಂಚಿಸಿದ ಕಾರಣಕ್ಕೆ ಲಕ್ಷ್ಮಣ ಸವದಿ, ಜಗದೀಶ ಶಟ್ಟರ್ ಅವರಂಥ ಹಿರಿಯ ನಾಯಕರು ಪಕ್ಷದ ನಾಯಕತ್ವದ ವರ್ತನೆಯಿಂದ ಹೊರಬರುತ್ತಿದ್ದಾರೆ. ಯಡಿಯೂರಪ್ಪ, ಶಟ್ಟರ್ ಅವರಿಗಾದ ಗತಿಯೇ ಬೊಮ್ಮಾಯಿ ಅವರಿಗೂ ಆಗಲಿದೆ ಎಂದು ಎಚ್ಚರಿಸಿದರು.

ಬಿಜೆಪಿ ನಾಯಕರು ಕಾಂಗ್ರೆಸ್ ವೀರೇಂದ್ರ ಪಾಟೀಲ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಿತು ಎಂದು ದೂರುತ್ತಾರೆ. ಆದರೆ ಮುಖ್ಯಮಂತ್ರಿ ಆಗಿದ್ದ ವೀರೇಂದ್ರ ಪಾಟೀಲ ಅವರು ಅನಾರೋಗ್ಯ ಪೀಡಿತರಾದ ಕಾರಣ ಅವರನ್ನು ಬದಲಿಸಲಾಗಿತ್ತು. ಆದರೆ ಯಡಿಯೂರಪ್ಪ ಅವರಿಗೆ ಈಗಲೂ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಆದರೂ ಅವರನ್ನು ಅಗೌರವವಾಗಿ ನಡೆಸಿಕೊಳ್ಳಲಾಯಿತು ಎಂದು ಹರಿಹಾಯ್ದರು.

ಲಿಂಗಾಯತ ಸಮುದಾದ ಯಡಿಯೂರಪ್ಪ ಅವರನ್ನು ಪದಚ್ಯುತ ಮಾಡಿದ ಬಳಿಕ ಲಿಂಗಾಯತ ನಾಯಕರು, ವೀರಶೈವ ಮಹಾಸಭಾ ಸೇರಿದಂತೆ ವೀರಶೈವ ಸಮುದಾಯದ ಹಲವರು ಧ್ವನಿ ಎತ್ತಿದ್ದರಿಂದ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಮಾಡಿದ್ದು ಎಂಬುದನ್ನು ಬೊಮ್ಮಾಯಿ ಅವರು ಮರೆಯಬಾರದು.

ಕಾಂಗ್ರೆಸ್ ಶಾಸಕರು, ಪಕ್ಷ ಬಯಸಿದಲ್ಲಿ, ಹೈಕಮಾಂಡ ಒಪ್ಪಿದಲ್ಲಿ ನಾನು ಮುಖ್ಯಮಂತ್ರಿ ಆಗಬಲ್ಲೆ, ಸಮರ್ಥನೂ ಇದ್ದೇನೆ. ನಾನು ಮಾತ್ರವಲ್ಲ ದೇಶಪಾಂಡೆ, ಕೃಷ್ಣ ಭೈರೆಗೌಡ, ಪರಮೇಶ್ವರ ಹೀಗೆ ಹಲವರು ಮುಖ್ಯಮಂತ್ರಿ ಆಗುವ ಅರ್ಹತೆ ಜೊತೆ ಸಮರ್ಥರಿದ್ದಾರೆ ಎಂದರು.

ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮಾ ಗಾಂಧೀಜಿ, ಇಂದಿರಾಗಾಂಧಿ, ರಾಜೀವ ಗಾಂಧಿ ಅವರಂಥ ನಾಯಕರು ಅಲಂಕರಿಸಿದ ಹುದ್ದೆಯಲ್ಲಿದ್ದಾರೆ. ಪ್ರಧಾನಮಂತ್ರಿ ಹುದ್ದೆಗೆ ಸಮರ್ಥರಾಗಿರುವ ಅವರನ್ನು ರಾಜ್ಯದ ಮುಖ್ಯಮಂತ್ರಿಯಂಥ ಸಣ್ಣ ಸ್ಥಾನಕ್ಕೆ ಪರಿಗಣಿಸಿ ಚರ್ಚಿಸುವುದು ಸರಿಯಲ್ಲ. ಇದರ ಹೊರತಾಗಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

9 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago