ಬೆಂಗಳೂರು: ಕೃತಕ ಬಣ್ಣಗಳನ್ನು ಬಳಸಿ ತಯಾರಿಸುತ್ತಿದ್ದ ಕಾಟನ್ ಕ್ಯಾಂಡಿಯನ್ನು ರಾಜ್ಯಾದ್ಯಂತ ಬ್ಯಾನ್ ಮಾಡಲಾಗಿದೆ ಮತ್ತು ಗೋಬಿ ಮಂಚೂರಿಗೆ ಯಾವುದೇ ರಾಸಾಯನಿಕ ಬಳಕೆ ಮಾಡದಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹೆಚ್ಚಾಗಿ ಮಕ್ಕಳು ಮತ್ತು ಯುವಕರು ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ನು ಸೇವನೆ ಮಾಡುತ್ತಿದ್ದು, ಇದರಲ್ಲಿ ಬಳಸಲಾಗುವ ಕೃತ ಬಣ್ಣವನ್ನು ಬಳಸಿ ಇನ್ಮುಂದೆ ಗೋಬಿ ಮತ್ತು ಕ್ಯಾಂಡಿ ತಯಾರಿಸಿದರೆ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಲಾಗಿದೆ.
ಕನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ.
ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ಬ್ಯಾನ್ ಆಗಿದೆ, ಗೋಬಿಯಲ್ಲಿ ಕೃತಕ ಬಣ್ಣ ಬಳಸಿದರೇ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಗೋಬಿ ಮಂಚೂರಿ ಸಸ್ಯಾಹಾರಿ ಪದಾರ್ಥ, ಹೀಗಾಗಿ ನಿಷೇಧ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕೃತಕ ಬಣ್ಣ ಬಳಸದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್ಸೆಟ್ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್ ರಾಸಾಯನಿಕ ಅಂಶ ಪತ್ತೆಯಾಗಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…