BREAKING NEWS

ರಾಜ್ಯದಲ್ಲಿ ಬ್ಯಾನ್‌ ಆಯ್ತು ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ!

ಬೆಂಗಳೂರು: ಕೃತಕ ಬಣ್ಣಗಳನ್ನು ಬಳಸಿ ತಯಾರಿಸುತ್ತಿದ್ದ ಕಾಟನ್‌ ಕ್ಯಾಂಡಿಯನ್ನು ರಾಜ್ಯಾದ್ಯಂತ ಬ್ಯಾನ್‌ ಮಾಡಲಾಗಿದೆ ಮತ್ತು ಗೋಬಿ ಮಂಚೂರಿಗೆ ಯಾವುದೇ ರಾಸಾಯನಿಕ ಬಳಕೆ ಮಾಡದಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಹೆಚ್ಚಾಗಿ ಮಕ್ಕಳು ಮತ್ತು ಯುವಕರು ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ನು ಸೇವನೆ ಮಾಡುತ್ತಿದ್ದು, ಇದರಲ್ಲಿ ಬಳಸಲಾಗುವ ಕೃತ ಬಣ್ಣವನ್ನು ಬಳಸಿ ಇನ್ಮುಂದೆ ಗೋಬಿ ಮತ್ತು ಕ್ಯಾಂಡಿ ತಯಾರಿಸಿದರೆ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಲಾಗಿದೆ.

ಕನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ.

ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ಬ್ಯಾನ್ ಆಗಿದೆ, ಗೋಬಿಯಲ್ಲಿ ಕೃತಕ ಬಣ್ಣ ಬಳಸಿದರೇ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಗೋಬಿ ಮಂಚೂರಿ ಸಸ್ಯಾಹಾರಿ ಪದಾರ್ಥ, ಹೀಗಾಗಿ ನಿಷೇಧ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕೃತಕ ಬಣ್ಣ ಬಳಸದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್‌ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್‌ ರಾಸಾಯನಿಕ ಅಂಶ ಪತ್ತೆಯಾಗಿದೆ.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

3 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

3 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago