ಬೆಂಗಳೂರು: ಕೃತಕ ಬಣ್ಣಗಳನ್ನು ಬಳಸಿ ತಯಾರಿಸುತ್ತಿದ್ದ ಕಾಟನ್ ಕ್ಯಾಂಡಿಯನ್ನು ರಾಜ್ಯಾದ್ಯಂತ ಬ್ಯಾನ್ ಮಾಡಲಾಗಿದೆ ಮತ್ತು ಗೋಬಿ ಮಂಚೂರಿಗೆ ಯಾವುದೇ ರಾಸಾಯನಿಕ ಬಳಕೆ ಮಾಡದಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹೆಚ್ಚಾಗಿ ಮಕ್ಕಳು ಮತ್ತು ಯುವಕರು ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿಯನ್ನು ಸೇವನೆ ಮಾಡುತ್ತಿದ್ದು, ಇದರಲ್ಲಿ ಬಳಸಲಾಗುವ ಕೃತ ಬಣ್ಣವನ್ನು ಬಳಸಿ ಇನ್ಮುಂದೆ ಗೋಬಿ ಮತ್ತು ಕ್ಯಾಂಡಿ ತಯಾರಿಸಿದರೆ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಲಾಗಿದೆ.
ಕನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ.
ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆಯಲ್ಲಿ ಕಾಟನ್ ಕ್ಯಾಂಡಿ ಬ್ಯಾನ್ ಆಗಿದೆ, ಗೋಬಿಯಲ್ಲಿ ಕೃತಕ ಬಣ್ಣ ಬಳಸಿದರೇ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಗೋಬಿ ಮಂಚೂರಿ ಸಸ್ಯಾಹಾರಿ ಪದಾರ್ಥ, ಹೀಗಾಗಿ ನಿಷೇಧ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕೃತಕ ಬಣ್ಣ ಬಳಸದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್ಸೆಟ್ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್ ರಾಸಾಯನಿಕ ಅಂಶ ಪತ್ತೆಯಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…