BREAKING NEWS

ಆದಿತ್ಯಾ ಎಲ್ 1 ಉಪಗ್ರಹ ಉಡಾವಣೆಗೆ ಕ್ಷಣಗಣನೆ

ಬೆಂಗಳೂರು : ಚಂದ್ರಯಾನ ಯಶಸ್ಸಿನ ಬಳಿಕ ಇಸ್ರೋ ಈಗ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಆದಿತ್ಯ ಎಲ್-1ಪ್ರಯೋಗಕ್ಕೆ ವೇದಿಕೆ ಸಜ್ಜಾಗಿದೆ.

ಶ್ರೀಹರಿಕೋಟಾದ ಸತೀಶ್ ಧವನ್ ಅಂತರಿಕ್ಷ ಕೇಂದ್ರದಲ್ಲಿ ಇಂದು ಬೆಳಗ್ಗೆ 11.50ಕ್ಕೆ ಸರಿಯಾಗಿ ಆದಿತ್ಯ ಎಲ್1 ಹೊತ್ತ ಪಿಎಸ್‍ಎಲ್‍ವಿ-ಸಿ57 ರಾಕೆಟ್ ನಭಕ್ಕೆ ಚಿಮ್ಮಲಿದೆ. ಈ ಪ್ರಯೋಗದ ಹಿನ್ನೆಲೆಯಲ್ಲಿ ಶುಕ್ರವಾರ ಆದಿತ್ಯ ಎಲ್1 ಆಕೃತಿ ಹೊತ್ತ ಇಸ್ರೋ ವಿಜ್ಞಾನಿಗಳ ತಂಡ ತಿರುಮಲ ತಿಮ್ಮಪ್ಪನನ್ನು ದರ್ಶಿಸಿದೆ. ಸೂಳ್ಳೂರುಪೇಟೆಯ ಚೆಂಗಲಮ್ಮ ಪರಮೇಶ್ವರಿ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಸಿದೆ.

ಚಂದ್ರಯಾನ, ಮಂಗಳಯಾನದ ನಂತರ ಇಸ್ರೋ ಕೈಗೊಳ್ಳುತ್ತಿರುವ ಅತ್ಯಂತ ಪ್ರಮುಖ ಯೋಜನೆ ಇದಾಗಿದೆ. ಇದೇ ಮೊದಲ ಬಾರಿ ಸೂರ್ಯನ ಅಧ್ಯಯನಕ್ಕೆ ಮುಂದಾಗಿದೆ. ಇದಕ್ಕೆ ಯುರೋಪಿಯನ್ ಸ್ಪೇಸ್ ಏಜೆನ್ಸಿ, ಆಸ್ಟ್ರೇಲಿಯಾ ಸೇರಿ ವಿವಿಧ ದೇಶಗಳ ಅಂತರಿಕ್ಷ ಸಂಸ್ಥೆಗಳ ನೆರವನ್ನು ಇಸ್ರೋ ಪಡೆಯುತ್ತಿದೆ. ಈ ಪ್ರಯೋಗವನ್ನು ನೇರವಾಗಿ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಆದರೆ ಮೊದಲೇ ನೋಂದಣಿ ಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ.

lokesh

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

2 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

3 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

3 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

3 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

3 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

3 hours ago