ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ-3 ಯೋಜನೆಗೆ 1 ದಿನವಷ್ಟೇ ಬಾಕಿ ಇದ್ದು, 25 ಗಂಟೆ 30 ನಿಮಿಷಗಳ ಕೌಂಟ್ಡೌನ್ ಇಂದು ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಬುಧವಾರ ಸಿದ್ಧತಾ ಪರಿಶೀಲನೆಯನ್ನು ಇಸ್ರೋ ಮುಗಿಸಿದ್ದು, ಉಡಾವಣೆಗೆ ಅನುಮತಿ ನೀಡಿದೆ.
ಶುಕ್ರವಾರ ಮಧ್ಯಾಹ್ನ 2 ಗಂಟೆ 35 ನಿಮಿಷ 17 ಸೆಕೆಂಡ್ಗೆ ಚಂದ್ರಯಾನ ನೌಕೆಯನ್ನು ಹೊತ್ತ ರಾಕೆಟ್ ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ. ಈ ಉಡಾವಣೆಗೆ ದೇಶೀಯವಾಗಿ ನಿರ್ಮಾಣ ಮಾಡಲಾದ ಲಾಂಚಿಂಗ್ ವಾಹನ ಬಳಸಲಾಗುತ್ತಿದ್ದು, ಲ್ಯಾಂಡರ್ ಮತ್ತು ರೋವರ್ಗಳನ್ನು ಸಹ ದೇಶೀಯವಾಗಿ ತಯಾರಿಸಲಾಗಿದೆ. ಲ್ಯಾಂಡರ್ ಆಗಸ್ಟ್ನಲ್ಲಿ ಚಂದ್ರನ ಮೇಲೆ ಇಳಿಯಲಿದೆ. ಈ ಉಡಾವಣೆಯನ್ನು ಇಸ್ರೋದ ಅಧಿಕೃತ ಯೂಟ್ಯೂಬ್ ಚಾನಲ್ನಲ್ಲಿ ವೀಕ್ಷಿಸಬಹುದು ಎಂದು ಇಸ್ರೋ ಹೇಳಿದೆ.
ಇದು ಚಂದ್ರಯಾನ-2 ಯೋಜನೆಯ ಮುಂದುವರೆದ ಭಾಗವಾದ ಕಾರಣ ಈ ಯೋಜನೆಯ ಆರ್ಬಿಟರನ್ನು ಕೈಬಿಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಸಿದ್ಧತೆ ನಡೆಸಿದ್ದು, ಈ ಬಾರಿ ಸಕಲ ಪೂರ್ವ ತಯಾರಿಯೊಂದಿಗೆ ನೌಕೆಯನ್ನು ಸಿದ್ಧಪಡಿಸಲಾಗಿದೆ.
https://twitter.com/ANI/status/1679305173108404225?s=20
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…