ಬೆಂಗಳೂರು : ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಜಾಲತಾಣ ಹಾಗೂ ಮಾದ್ಯಮಗಳಲ್ಲಿ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಕೊನೆಯ ಭಾಗವಾಗಿರುವ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಇಲ್ಲಿನ ಸ್ಥಳೀಯರ ಭಾವನೆಗೆ ದಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ತಡೆಯಾಜ್ಞೆ ವಿಧಿಸಿದ್ದು, ಎಲ್ಲರಿಗೂ ಸಮನ್ಸ್ ನೀಡಿದ್ದು, ಡಿಸೆಂಬರ್ 5ಕ್ಕೆ ಕಾಯ್ದಿರಿಸಿದ್ದಾರೆ. ಹೈಕೋರ್ಟ್ ವಕೀಲ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…