ಬೆಂಗಳೂರು : ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ. ವಂಚನೆ ನಡೆಸಿರುವ ಪ್ರಕರಣದಲ್ಲಿ ಚೈತ್ರಾ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸದಂತೆ ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಜಾಲತಾಣ ಹಾಗೂ ಮಾದ್ಯಮಗಳಲ್ಲಿ ಕುಂದಾಪುರ ಹೆಸರು ತೆಗೆದುಹಾಕುವಂತೆ ಕೋರಿ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಉದ್ಯಮಿ, ಪ್ರಸ್ತುತ ಬೆಂಗಳೂರು ಹನುಮಂತ ನಗರದ ನಿವಾಸಿ ಗಣೇಶ್ ಶೆಟ್ಟಿ ಅರ್ಜಿ ಸಲ್ಲಿಸಿದ್ದರು.
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಅವರ ಸುದ್ದಿ ಪ್ರಸಾರ ಮಾಡುವಾಗ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸುವುದರಿಂದ ಕುಂದಾಪುರ ಊರಿನ ಹೆಸರಿಗೆ ಘಾಸಿಯಾಗುತ್ತದೆ. ಈ ಒಂದು ಘಟನೆಯಿಂದ ಭವಿಷ್ಯದ ಪೀಳಿಗೆಯನ್ನು ಕೆಟ್ಟ ದೃಷ್ಟಿಯಿಂದ ನೋಡುವಂತಾಗಬಹುದು. ಕುಂದಾಪುರ ದೇವಾಲಯಗಳಿರುವ ಮತ್ತು ಪ್ರಕೃತಿ ಸೊಬಗಿನ ಊರು. ಈ ಊರಿನ ಹೆಸರು ಆರೋಪಿಯೊಬ್ಬರ ಹೆಸರಿನ ಕೊನೆಯ ಭಾಗವಾಗಿರುವ ಕಾರಣಕ್ಕೆ ಹಾಳಾಗಬಾರದು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರಾ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಇಲ್ಲಿನ ಸ್ಥಳೀಯರ ಭಾವನೆಗೆ ದಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದರು. ಅದರಂತೆ ತಡೆಯಾಜ್ಞೆ ವಿಧಿಸಿದ್ದು, ಎಲ್ಲರಿಗೂ ಸಮನ್ಸ್ ನೀಡಿದ್ದು, ಡಿಸೆಂಬರ್ 5ಕ್ಕೆ ಕಾಯ್ದಿರಿಸಿದ್ದಾರೆ. ಹೈಕೋರ್ಟ್ ವಕೀಲ ಎಚ್. ಪವನಚಂದ್ರ ಶೆಟ್ಟಿ ವಾದಿಸಿದ್ದರು.
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…
ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…
ಗಿರೀಶ್ ಹುಣಸೂರು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…
ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…