BREAKING NEWS

ಕಾವೇರಿದ ಪ್ರತಿಭಟನೆ : ಮಂಡ್ಯ ಬಂದ್​

ಮಂಡ್ಯ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಜಿಲ್ಲಾ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಇಂದು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಜಿಲ್ಲಾ ಹಿತರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶುಕ್ರವಾರ ಸಭೆ ನಡೆಸಿ ಇಂದು ಬಂದ್‌ಗೆ ಕರೆ ನೀಡಿದ್ದರು. ಹೋಟೆಲ್, ಬೇಕರಿ, ಚಲನಚಿತ್ರ ಮಂದಿರ ಸೇರಿದಂತೆ ಎಲ್ಲ ಬಗೆಯ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಆಟೋ ಚಾಲಕರು, ಖಾಸಗಿ ವಾಹನ ಮಾಲೀಕರು, ಸ್ಟುಡಿಯೋ ಮಾಲೀಕರು, ಜಿಲ್ಲೆಯ ಎಲ್ಲಾ ವರ್ಗದ ಜನತೆ, ವಿದ್ಯಾರ್ಥಿ ಸಮೂಹ, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸ್ವಯಂಪ್ರೇರಿತವಾಗಿ ಬಂದ್‌ನಲ್ಲಿ ಭಾಗವಹಿಸಿ ಬೆಂಬಲ ಸೂಚಿಸುತ್ತಿವೆ. ಕಾವೇರಿ ಪ್ರತಿಯೊಬ್ಬರ ಹಕ್ಕು. ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್. ಪೇಟೆ, ನಾಗಮಂಗಲ ತಾಲೂಕುಗಳಲ್ಲಿ ಬಂದ್ ಮಾಡಲು ಸಹಕರಿಸುವಂತೆ ಜಿಲ್ಲಾ ಹಿತರಕ್ಷಣಾ ಸಮಿತಿ ಮನವಿ ಮಾಡಿದೆ.ರಾಜ್ಯ ಸರ್ಕಾರ, ವಿರೋಧ ಪಕ್ಷಗಳು, ಸಂಸದರಿಗೆ ಇದೊಂದು ಎಚ್ಚರಿಕೆಯ ಪಾಠವಾಗಬೇಕಿದೆ. ಕಾವೇರಿ ರಾಜ್ಯದ ಆಸ್ತಿಯಾಗಿದ್ದು, ಇದನ್ನು ರಕ್ಷಿಸಬೇಕಾಗಿರುವುದು ಎಲ್ಲರ ಕರ್ತವ್ಯವೂ ಆಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಅಂಗಡಿ ಮುಂಗಟ್ಟುಗಳು, ಸಂಘ ಸಂಸ್ಥೆಗಳು ಬಂದ್‌ನಲ್ಲಿ ಭಾಗವಹಿಸುವ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಪೊಲೀಸ್ ಬಂದೋಬಸ್ತ್ : ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ರೈತರು ಹಾಗೂ ಕನ್ನಡ ಪರ ಸಂಘಟನೆಗಳು ಮಂಡ್ಯ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್​ ಬಂದೋಬಸ್ತ್ ಮಾಡಲಾಗಿದೆ. ಬೆಳಿಗ್ಗೆ 8ರಿಂದ ಸಂಜೆ 6ಗಂಟೆವರೆಗೂ ಬಂದ್ ಇರಲಿದೆ. ಮಂಡ್ಯ ಬಂದ್​ಗೆ ಜನರಿಂದ ಉತ್ತಮ ಬೆಂಬಲ ಕೂಡ ವ್ಯಕ್ತವಾಗುತ್ತಿದೆ. ಸರ್ಕಾರಿ ಸಾರಿಗೆ ಸಂಚಾರ, ವೈದ್ಯಕೀಯ ಸೇವೆ ಸೇರಿ ಅಗತ್ಯ ಸೇವೆಗಳು ಲಭ್ಯ ಇರಲಿವೆ. ಆದರೆ ಖಾಸಗಿ ವಾಹನ, ಆಟೋ ಸೇವೆ ಸೇರಿ ಅಂಗಡಿ ಮುಂಗಟ್ಟುಗಳು ಇಂದು ಬಂದ್ ಇರಲಿವೆ.

 

lokesh

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

10 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

11 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

11 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

11 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

13 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

13 hours ago