BREAKING NEWS

ಕೋವಿಡ್‌: ಒಂದೇ ದಿನ 7,830 ಹೊಸ ಪ್ರಕರಣಗಳು ಪತ್ತೆ

ನವದೆಹಲಿ(ಪಿಟಿಐ): ದೇಶದಲ್ಲಿ ಒಂದೇ ದಿನ ಕೋವಿಡ್‌ನ 7,830 ಹೊಸ ಪ್ರಕರಣಗಳು ದಾಖಲಾಗಿವೆ. ಇವು ಕಳೆದ 223 ದಿನಗಳಲ್ಲಿ ದಾಖಲಾದ ದಿನವೊಂದರ ಅಧಿಕ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 40,215ಕ್ಕೆ ಏರಿಕೆಯಾಗಿದೆ. ಹೊಸದಾಗಿ 16 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 5,31,016ಕ್ಕೆ ಏರಿಕೆಯಾಗಿದೆ. ದೆಹಲಿ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶದಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಗುಜರಾತ್‌, ಹರಿಯಾಣ, ಮಹಾರಾಷ್ಟ್ರ, ತಮಿಳುನಾಡು ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಬ್ಬರು ಮತ್ತು ಕೇರಳದಲ್ಲಿ ಐವರು ಮೃತಪಟ್ಟಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ 1ರಂದು 7,946 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನ ಅತ್ಯಂತ ಹೆಚ್ಚು ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಕೋವಿಡ್‌ ಲಸಿಕಾ ಅಭಿಯಾನದ ಅಡಿ ಇದುವರೆಗೆ 220.66 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.

andolanait

Recent Posts

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

31 mins ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

1 hour ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

2 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

2 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

2 hours ago

ಕೃಷಿ ಪಂಪ್‌ಸೆಟ್‌ ಆನ್‌ ಮಾಡುವಾಗ ವಿದ್ಯುತ್‌ ಸ್ಪರ್ಶ : ವ್ಯಕ್ತಿ ಸಾವು

ಗುಂಡ್ಲುಪೇಟೆ: ಮೋಟರ್ ಆನ್ ಮಾಡುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿರುವ ಘಟನೆ ತಾಲೂಕಿನ ತೆರಕಣಾಂಬಿ ಗ್ರಾಮದ ತೋಟವೊಂದರಲ್ಲಿ…

3 hours ago