ಜಿನೀವಾ: ‘ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದ್ದು, ಕೋವಿಡ್ ಪ್ರಮಾಣ ಕಡಿಮೆಯಾಗುವ ಮೊದಲು ಹೆಚ್ಚಿನ ತೊಂದರೆಯನ್ನುಂಟು ಮಾಡುವ ಸಾಧ್ಯತೆಯಿದೆ ‘ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
‘ಕಳೆದ ಒಂದು ತಿಂಗಳಲ್ಲಿ 23 ಸಾವಿರದಷ್ಟು ಜನ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ. ಸುಮಾರು 3 ಲಕ್ಷ ಜನರು ಕೋವಿಡ್ಗೆ ತುತ್ತಾಗಿದ್ದಾರೆ‘ ಎಂದು ಕೋವಿಡ್ ಸಂಬಂಧಿ ತಪಾಸಣೆ ಕಡಿಮೆಯಾದ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿದೆ.
‘ಕೋವಿಡ್ ಪರೀಕ್ಷೆಗಳು ಕಡಿಮೆಯಾದ ಕಾರಣ ಅದರ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಆದರೆ ಸಾಂಕ್ರಾಮಿಕವು ನಮ್ಮ ನಡುವೆಯೇ ಇದೆ. ವಾಸ್ತವದಲ್ಲಿ ವೈರಸ್ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ವಿಭಾಗದ ನಿರ್ದೇಶಕರಾದ ಮೈಕಲ್ ರಯಾನ್ ಅವರು ತಿಳಿಸಿದರು.
‘ಶ್ವಾಸಕೋಶಕ್ಕೆ ಸಂಬಂಧಿಸಿದ ವೈರಸ್ ಸಾಂಕ್ರಾಮಿಕ ಹಂತದಿಂದ ಎಂಡಮಿಕ್ ಹಂತಕ್ಕೆ ಹೋಗುವುದಿಲ್ಲ. ಬದಲಾಗಿ, ಕಾಲಕ್ಕೆ ತಕ್ಕಂತೆ ಕಡಿಮೆ ಚಟುವಟಿಕೆಯನ್ನು ತೋರಿಸುವುದರ ಜೊತೆಗೆ ಹೆಚ್ಚಿನ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ‘ ಎಂದು ಹೇಳಿದರು.
‘ಕೊರೊನಾವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಾಗೂ, ದುರ್ಬಲ ಆರೋಗ್ಯ ಹೊಂದಿರುವ ಜನರ ಶ್ವಾಸಕೋಶಕ್ಕೆ ಇದು ಹೆಚ್ಚಿನ ಘಾಸಿ ಉಂಟುಮಾಡಬಹುದು‘ ಎಂದು ರಯಾನ್ ಹೇಳಿದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…