ಜಿನೀವಾ: ‘ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದ್ದು, ಕೋವಿಡ್ ಪ್ರಮಾಣ ಕಡಿಮೆಯಾಗುವ ಮೊದಲು ಹೆಚ್ಚಿನ ತೊಂದರೆಯನ್ನುಂಟು ಮಾಡುವ ಸಾಧ್ಯತೆಯಿದೆ ‘ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
‘ಕಳೆದ ಒಂದು ತಿಂಗಳಲ್ಲಿ 23 ಸಾವಿರದಷ್ಟು ಜನ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ. ಸುಮಾರು 3 ಲಕ್ಷ ಜನರು ಕೋವಿಡ್ಗೆ ತುತ್ತಾಗಿದ್ದಾರೆ‘ ಎಂದು ಕೋವಿಡ್ ಸಂಬಂಧಿ ತಪಾಸಣೆ ಕಡಿಮೆಯಾದ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿದೆ.
‘ಕೋವಿಡ್ ಪರೀಕ್ಷೆಗಳು ಕಡಿಮೆಯಾದ ಕಾರಣ ಅದರ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಆದರೆ ಸಾಂಕ್ರಾಮಿಕವು ನಮ್ಮ ನಡುವೆಯೇ ಇದೆ. ವಾಸ್ತವದಲ್ಲಿ ವೈರಸ್ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ವಿಭಾಗದ ನಿರ್ದೇಶಕರಾದ ಮೈಕಲ್ ರಯಾನ್ ಅವರು ತಿಳಿಸಿದರು.
‘ಶ್ವಾಸಕೋಶಕ್ಕೆ ಸಂಬಂಧಿಸಿದ ವೈರಸ್ ಸಾಂಕ್ರಾಮಿಕ ಹಂತದಿಂದ ಎಂಡಮಿಕ್ ಹಂತಕ್ಕೆ ಹೋಗುವುದಿಲ್ಲ. ಬದಲಾಗಿ, ಕಾಲಕ್ಕೆ ತಕ್ಕಂತೆ ಕಡಿಮೆ ಚಟುವಟಿಕೆಯನ್ನು ತೋರಿಸುವುದರ ಜೊತೆಗೆ ಹೆಚ್ಚಿನ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ‘ ಎಂದು ಹೇಳಿದರು.
‘ಕೊರೊನಾವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಾಗೂ, ದುರ್ಬಲ ಆರೋಗ್ಯ ಹೊಂದಿರುವ ಜನರ ಶ್ವಾಸಕೋಶಕ್ಕೆ ಇದು ಹೆಚ್ಚಿನ ಘಾಸಿ ಉಂಟುಮಾಡಬಹುದು‘ ಎಂದು ರಯಾನ್ ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…