ಜಿನೀವಾ: ‘ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದ್ದು, ಕೋವಿಡ್ ಪ್ರಮಾಣ ಕಡಿಮೆಯಾಗುವ ಮೊದಲು ಹೆಚ್ಚಿನ ತೊಂದರೆಯನ್ನುಂಟು ಮಾಡುವ ಸಾಧ್ಯತೆಯಿದೆ ‘ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
‘ಕಳೆದ ಒಂದು ತಿಂಗಳಲ್ಲಿ 23 ಸಾವಿರದಷ್ಟು ಜನ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ. ಸುಮಾರು 3 ಲಕ್ಷ ಜನರು ಕೋವಿಡ್ಗೆ ತುತ್ತಾಗಿದ್ದಾರೆ‘ ಎಂದು ಕೋವಿಡ್ ಸಂಬಂಧಿ ತಪಾಸಣೆ ಕಡಿಮೆಯಾದ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿದೆ.
‘ಕೋವಿಡ್ ಪರೀಕ್ಷೆಗಳು ಕಡಿಮೆಯಾದ ಕಾರಣ ಅದರ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಆದರೆ ಸಾಂಕ್ರಾಮಿಕವು ನಮ್ಮ ನಡುವೆಯೇ ಇದೆ. ವಾಸ್ತವದಲ್ಲಿ ವೈರಸ್ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ವಿಭಾಗದ ನಿರ್ದೇಶಕರಾದ ಮೈಕಲ್ ರಯಾನ್ ಅವರು ತಿಳಿಸಿದರು.
‘ಶ್ವಾಸಕೋಶಕ್ಕೆ ಸಂಬಂಧಿಸಿದ ವೈರಸ್ ಸಾಂಕ್ರಾಮಿಕ ಹಂತದಿಂದ ಎಂಡಮಿಕ್ ಹಂತಕ್ಕೆ ಹೋಗುವುದಿಲ್ಲ. ಬದಲಾಗಿ, ಕಾಲಕ್ಕೆ ತಕ್ಕಂತೆ ಕಡಿಮೆ ಚಟುವಟಿಕೆಯನ್ನು ತೋರಿಸುವುದರ ಜೊತೆಗೆ ಹೆಚ್ಚಿನ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ‘ ಎಂದು ಹೇಳಿದರು.
‘ಕೊರೊನಾವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಾಗೂ, ದುರ್ಬಲ ಆರೋಗ್ಯ ಹೊಂದಿರುವ ಜನರ ಶ್ವಾಸಕೋಶಕ್ಕೆ ಇದು ಹೆಚ್ಚಿನ ಘಾಸಿ ಉಂಟುಮಾಡಬಹುದು‘ ಎಂದು ರಯಾನ್ ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…