ಜಿನೀವಾ: ‘ಕೊರೊನಾ ಸಾಂಕ್ರಾಮಿಕ ಇನ್ನೂ ಚಲನಶೀಲವಾಗಿದ್ದು, ಕೋವಿಡ್ ಪ್ರಮಾಣ ಕಡಿಮೆಯಾಗುವ ಮೊದಲು ಹೆಚ್ಚಿನ ತೊಂದರೆಯನ್ನುಂಟು ಮಾಡುವ ಸಾಧ್ಯತೆಯಿದೆ ‘ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
‘ಕಳೆದ ಒಂದು ತಿಂಗಳಲ್ಲಿ 23 ಸಾವಿರದಷ್ಟು ಜನ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ. ಸುಮಾರು 3 ಲಕ್ಷ ಜನರು ಕೋವಿಡ್ಗೆ ತುತ್ತಾಗಿದ್ದಾರೆ‘ ಎಂದು ಕೋವಿಡ್ ಸಂಬಂಧಿ ತಪಾಸಣೆ ಕಡಿಮೆಯಾದ ಹಿನ್ನೆಲೆಯಲ್ಲಿ ಆತಂಕ ವ್ಯಕ್ತಪಡಿಸಿದೆ.
‘ಕೋವಿಡ್ ಪರೀಕ್ಷೆಗಳು ಕಡಿಮೆಯಾದ ಕಾರಣ ಅದರ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಆದರೆ ಸಾಂಕ್ರಾಮಿಕವು ನಮ್ಮ ನಡುವೆಯೇ ಇದೆ. ವಾಸ್ತವದಲ್ಲಿ ವೈರಸ್ ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ವಿಭಾಗದ ನಿರ್ದೇಶಕರಾದ ಮೈಕಲ್ ರಯಾನ್ ಅವರು ತಿಳಿಸಿದರು.
‘ಶ್ವಾಸಕೋಶಕ್ಕೆ ಸಂಬಂಧಿಸಿದ ವೈರಸ್ ಸಾಂಕ್ರಾಮಿಕ ಹಂತದಿಂದ ಎಂಡಮಿಕ್ ಹಂತಕ್ಕೆ ಹೋಗುವುದಿಲ್ಲ. ಬದಲಾಗಿ, ಕಾಲಕ್ಕೆ ತಕ್ಕಂತೆ ಕಡಿಮೆ ಚಟುವಟಿಕೆಯನ್ನು ತೋರಿಸುವುದರ ಜೊತೆಗೆ ಹೆಚ್ಚಿನ ಸಾಮರ್ಥ್ಯವನ್ನು ಪ್ರದರ್ಶಿಸುತ್ತದೆ‘ ಎಂದು ಹೇಳಿದರು.
‘ಕೊರೊನಾವನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ಹಾಗೂ, ದುರ್ಬಲ ಆರೋಗ್ಯ ಹೊಂದಿರುವ ಜನರ ಶ್ವಾಸಕೋಶಕ್ಕೆ ಇದು ಹೆಚ್ಚಿನ ಘಾಸಿ ಉಂಟುಮಾಡಬಹುದು‘ ಎಂದು ರಯಾನ್ ಹೇಳಿದರು.
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…
ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…
ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…
ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…
ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…