ನವದೆಹಲಿ: ಕೋವಿಡ್ ಪರಿಸ್ಥಿತಿಯನ್ನು ಎದುರಿಸುವುದಕ್ಕೆ ಸಂಬಂಧಿಸಿ ಆಸ್ಪತ್ರೆಗಳ ಸನ್ನದ್ಧತೆಯನ್ನು ಖಾತ್ರಿಪಡಿಸುವ ಸಲವಾಗಿ ದೇಶದಾದ್ಯಂತ ಸೋಮವಾರ ಹಾಗೂ ಮಂಗಳವಾರ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕ ಹಾಗೂ ಖಾಸಗಿ ಆಸ್ಪತ್ರೆಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿವೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಹರಿಯಾಣದ ಝಜ್ಜರ್ನಲ್ಲಿರುವ ಎಐಐಎಂಎಸ್ ಶಾಖೆಗೆ ಸೋಮವಾರ ಭೇಟಿ ನೀಡಿ, ಪರಿಶೀಲನೆ ನಡೆಸುವರು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಚಿವ ಮಾಂಡವೀಯ ಅಧ್ಯಕ್ಷತೆಯಲ್ಲಿ ಶುಕ್ರವಾರ ಪರಿಶೀಲನಾ ಸಭೆ ನಡೆದಿತ್ತು. ಆಸ್ಪತ್ರೆಗಳಲ್ಲಿನ ಮೂಲಸೌಕರ್ಯಗಳು ಹಾಗೂ ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿ ಅವುಗಳ ಸನ್ನದ್ಧತೆ ಪರಿಶೀಲಿಸಲು ಏ.10 ಹಾಗೂ 11ರಂದು ಅಣಕು ಕಾರ್ಯಾಚರಣೆ ನಡೆಸಲು ಅಂದಿನ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…