BREAKING NEWS

ರಾಜ್ಯದಲ್ಲಿ ಕೋವಿಡ್‌ ಟೆಸ್ಟ್‌ ಹೆಚ್ಚಳ ಮಾಡಲಾಗುವುದು: ದಿನೇಶ್‌ ಗುಂಡೂರಾವ್‌

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್‌ ಉಲ್ಬಣಗೊಂಡಿರುವ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್‌ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ವೈರಲ್ ಫೀವರ್ ಕಂಡುಬಂದರೆ ಕೊವಿಡ್ ಟೆಸ್ಟ್ ಮಾಡಲಾಗುವುದು. ಕೊವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ.

1 ತಿಂಗಳ ಟೆಸ್ಟ್ ಮಾಡಲು 3 ಲಕ್ಷ ಆರ್‌ಟಿಸಿಪಿಆರ್‌ ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧಿ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ. 3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ ಮತ್ತು ಡಿ.19ರಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಕೊವಿಡ್ ಉಪ ತಳಿ ಪ್ರಕರಣ ದಿನೇದಿನೆ ಹೆಚ್ಚಳವಾಗುತ್ತಿದೆ. ಕರ್ನಾಟಕ ರಾಜ್ಯದಲ್ಲೂ 58 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿತ 47 ಜನ ಹೋಮ್​ ಐಸೋಲೇಷನ್​ನಲ್ಲಿದ್ದಾರೆ. ಕೊರೊನಾ ಸೋಂಕಿತ 6 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್​ನಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಭ್ರೂಣಹತ್ಯೆ ಪತ್ತೆ ಟಾಸ್ಕ್ ಪೋರ್ಸ್ ರಚನೆ : ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ವಿಚಾರವಾಗಿ ಮುಂದಿನ ವಾರದೊಳಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲೂ ಟಾಸ್ಕ್ ಪೋರ್ಸ್ ರಚನೆ ಮಾಡಲು ಸಲಹೆ ಇದೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಕೂಡ ಒಂದೇ ಸಲಹೆ ನೀಡಿದೆ. ಕಾನೂನಾತ್ಮಕ ತೊಡಕು ವಿಚಾರವಾಗಿ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago