BREAKING NEWS

ರಾಜ್ಯದಲ್ಲಿ ಕೋವಿಡ್‌ ಟೆಸ್ಟ್‌ ಹೆಚ್ಚಳ ಮಾಡಲಾಗುವುದು: ದಿನೇಶ್‌ ಗುಂಡೂರಾವ್‌

ಬೆಂಗಳೂರು : ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್‌ ಉಲ್ಬಣಗೊಂಡಿರುವ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್‌ ಲಕ್ಷಣ ಕಂಡುಬಂದರೆ ಟೆಸ್ಟ್ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನಲೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ಬಳಿಕ ವಿಕಾಸಸೌಧದಲ್ಲಿ ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ವೈರಲ್ ಫೀವರ್ ಕಂಡುಬಂದರೆ ಕೊವಿಡ್ ಟೆಸ್ಟ್ ಮಾಡಲಾಗುವುದು. ಕೊವಿಡ್ ಲಕ್ಷಣ ಕಂಡು ಬಂದರೆ ಪರೀಕ್ಷೆ ಮಾಡುತ್ತೇವೆ ಎಂದು ಹೇಳಿದ್ದಾರೆ.

1 ತಿಂಗಳ ಟೆಸ್ಟ್ ಮಾಡಲು 3 ಲಕ್ಷ ಆರ್‌ಟಿಸಿಪಿಆರ್‌ ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧಿ, ಬೆಡ್ ವ್ಯವಸ್ಥೆ, ಆಕ್ಸಿಜನ್ ವ್ಯವಸ್ಥೆ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಮಾಡಲು ಸೂಚನೆ ನೀಡಲಾಗಿದೆ. 3 ತಿಂಗಳಿಗೆ ಬೇಕಾಗುವಷ್ಟು ಕೊವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ ಮತ್ತು ಡಿ.19ರಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕೇರಳದಲ್ಲಿ ಕೊವಿಡ್ ಉಪ ತಳಿ ಪ್ರಕರಣ ದಿನೇದಿನೆ ಹೆಚ್ಚಳವಾಗುತ್ತಿದೆ. ಕರ್ನಾಟಕ ರಾಜ್ಯದಲ್ಲೂ 58 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಕೊರೊನಾ ಸೋಂಕಿತ 47 ಜನ ಹೋಮ್​ ಐಸೋಲೇಷನ್​ನಲ್ಲಿದ್ದಾರೆ. ಕೊರೊನಾ ಸೋಂಕಿತ 6 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ಟೋಬರ್​ನಲ್ಲಿ ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಭ್ರೂಣಹತ್ಯೆ ಪತ್ತೆ ಟಾಸ್ಕ್ ಪೋರ್ಸ್ ರಚನೆ : ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ವಿಚಾರವಾಗಿ ಮುಂದಿನ ವಾರದೊಳಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಜಿಲ್ಲಾ ಮಟ್ಟದಲ್ಲೂ ಟಾಸ್ಕ್ ಪೋರ್ಸ್ ರಚನೆ ಮಾಡಲು ಸಲಹೆ ಇದೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಕೂಡ ಒಂದೇ ಸಲಹೆ ನೀಡಿದೆ. ಕಾನೂನಾತ್ಮಕ ತೊಡಕು ವಿಚಾರವಾಗಿ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

andolanait

Recent Posts

ಮೈಸೂರು: ಕೆಮಿಕಲ್‌ ಘಟಕದ ಮೇಲೆ ದೆಹಲಿ ಪೊಲೀಸರ ದಾಳಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್‌ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…

6 mins ago

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

3 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

3 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

3 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

4 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

4 hours ago