ಹನಗೋಡು ; ಹಸುವೊಂದು ಮೇವು ಮೇಯ್ಯುವಾಗ ಇಂದು ಮಧ್ಯಾಹ್ನ ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಘಟನೆ ಹನಗೋಡು ಸಮೀಪದ ಬಿ ಆರ್ ಕಾವಲು ಅರಣ್ಯದಲ್ಲಿ ನಡೆದಿದೆ.
ಗೌಡಿಕೆರೆ ಗ್ರಾಮದ ಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 ಮೀ. ನಷ್ಟು ಎಳೆದೊಯ್ದು ಬಿಟ್ಟು ಹೋಗಿದೆ. ಹಸುವಿನ ಮಾಲೀಕ ಶೇಖರ್ ಮೇವು ಮೇಯ್ಯುವ ಜಾಗಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಎರಡು ತಿಂಗಳ ಹಿಂದೆ ಹಸುವೊಂದನ್ನು ಹುಲಿ ಗಾಯಗೊಳಿಸಿ ಬಿಟ್ಟು ಹೋಗಿತ್ತು. ಈ ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸತತ ಎರಡು ದಿನ ಹುಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜನತೆ ಆತಂಕಗೊಂಡಿದ್ದು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಭಯಭೀತರಾಗಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿ ಸಿದ್ಧರಾಜು ಸ್ಥಳಕ್ಕೆ ಭೇಟಿ ನೀಡಿ ಇಲಾಖೆಯಿಂದ ಬರುವ ಪರಿಹಾರ ಧನವನ್ನು ಕೂಡಲೇ ನೀಡಲಾಗುವುದು ಎಂದು ತಿಳಿಸಿದರು.
ಈ ವ್ಯಾಪ್ತಿಯಲ್ಲಿ ನಿಲ್ಲದ ಹುಲಿ ಅಟ್ಟಹಾಸ ; ನಾಲ್ಕು ಹಸುಗಳು ಬಲಿ
ಭಯ ಹುಟ್ಟಿಸಿದ ಹುಲಿ ಹೆಜ್ಜೆ: ಬಿಲ್ಲೆನಹೊಸಹಳ್ಳಿ ಕೊಳವಿಗೆ ನೇಗತ್ತೂರು ಹೀಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮನೆ ಮಾಡಿದ್ದು.ತಕ್ಷಣ ಹುಲಿ ಹಿಡಿಯಲು ಕ್ರಮ ವಹಿಸಬೇಕು ಎಂದು ಗ್ರಾಂ ಪಂ ಸದಸ್ಯ ಎಚ್ ಪಿ ಶಿವಣ್ಣ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…