ಹನಗೋಡು ; ಹಸುವೊಂದು ಮೇವು ಮೇಯ್ಯುವಾಗ ಇಂದು ಮಧ್ಯಾಹ್ನ ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಘಟನೆ ಹನಗೋಡು ಸಮೀಪದ ಬಿ ಆರ್ ಕಾವಲು ಅರಣ್ಯದಲ್ಲಿ ನಡೆದಿದೆ.
ಗೌಡಿಕೆರೆ ಗ್ರಾಮದ ಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 ಮೀ. ನಷ್ಟು ಎಳೆದೊಯ್ದು ಬಿಟ್ಟು ಹೋಗಿದೆ. ಹಸುವಿನ ಮಾಲೀಕ ಶೇಖರ್ ಮೇವು ಮೇಯ್ಯುವ ಜಾಗಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಎರಡು ತಿಂಗಳ ಹಿಂದೆ ಹಸುವೊಂದನ್ನು ಹುಲಿ ಗಾಯಗೊಳಿಸಿ ಬಿಟ್ಟು ಹೋಗಿತ್ತು. ಈ ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸತತ ಎರಡು ದಿನ ಹುಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜನತೆ ಆತಂಕಗೊಂಡಿದ್ದು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಭಯಭೀತರಾಗಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿ ಸಿದ್ಧರಾಜು ಸ್ಥಳಕ್ಕೆ ಭೇಟಿ ನೀಡಿ ಇಲಾಖೆಯಿಂದ ಬರುವ ಪರಿಹಾರ ಧನವನ್ನು ಕೂಡಲೇ ನೀಡಲಾಗುವುದು ಎಂದು ತಿಳಿಸಿದರು.
ಈ ವ್ಯಾಪ್ತಿಯಲ್ಲಿ ನಿಲ್ಲದ ಹುಲಿ ಅಟ್ಟಹಾಸ ; ನಾಲ್ಕು ಹಸುಗಳು ಬಲಿ
ಭಯ ಹುಟ್ಟಿಸಿದ ಹುಲಿ ಹೆಜ್ಜೆ: ಬಿಲ್ಲೆನಹೊಸಹಳ್ಳಿ ಕೊಳವಿಗೆ ನೇಗತ್ತೂರು ಹೀಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮನೆ ಮಾಡಿದ್ದು.ತಕ್ಷಣ ಹುಲಿ ಹಿಡಿಯಲು ಕ್ರಮ ವಹಿಸಬೇಕು ಎಂದು ಗ್ರಾಂ ಪಂ ಸದಸ್ಯ ಎಚ್ ಪಿ ಶಿವಣ್ಣ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…