ಹನಗೋಡು ; ಹಸುವೊಂದು ಮೇವು ಮೇಯ್ಯುವಾಗ ಇಂದು ಮಧ್ಯಾಹ್ನ ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಘಟನೆ ಹನಗೋಡು ಸಮೀಪದ ಬಿ ಆರ್ ಕಾವಲು ಅರಣ್ಯದಲ್ಲಿ ನಡೆದಿದೆ.
ಗೌಡಿಕೆರೆ ಗ್ರಾಮದ ಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 ಮೀ. ನಷ್ಟು ಎಳೆದೊಯ್ದು ಬಿಟ್ಟು ಹೋಗಿದೆ. ಹಸುವಿನ ಮಾಲೀಕ ಶೇಖರ್ ಮೇವು ಮೇಯ್ಯುವ ಜಾಗಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಎರಡು ತಿಂಗಳ ಹಿಂದೆ ಹಸುವೊಂದನ್ನು ಹುಲಿ ಗಾಯಗೊಳಿಸಿ ಬಿಟ್ಟು ಹೋಗಿತ್ತು. ಈ ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸತತ ಎರಡು ದಿನ ಹುಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜನತೆ ಆತಂಕಗೊಂಡಿದ್ದು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಭಯಭೀತರಾಗಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿ ಸಿದ್ಧರಾಜು ಸ್ಥಳಕ್ಕೆ ಭೇಟಿ ನೀಡಿ ಇಲಾಖೆಯಿಂದ ಬರುವ ಪರಿಹಾರ ಧನವನ್ನು ಕೂಡಲೇ ನೀಡಲಾಗುವುದು ಎಂದು ತಿಳಿಸಿದರು.
ಈ ವ್ಯಾಪ್ತಿಯಲ್ಲಿ ನಿಲ್ಲದ ಹುಲಿ ಅಟ್ಟಹಾಸ ; ನಾಲ್ಕು ಹಸುಗಳು ಬಲಿ
ಭಯ ಹುಟ್ಟಿಸಿದ ಹುಲಿ ಹೆಜ್ಜೆ: ಬಿಲ್ಲೆನಹೊಸಹಳ್ಳಿ ಕೊಳವಿಗೆ ನೇಗತ್ತೂರು ಹೀಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮನೆ ಮಾಡಿದ್ದು.ತಕ್ಷಣ ಹುಲಿ ಹಿಡಿಯಲು ಕ್ರಮ ವಹಿಸಬೇಕು ಎಂದು ಗ್ರಾಂ ಪಂ ಸದಸ್ಯ ಎಚ್ ಪಿ ಶಿವಣ್ಣ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…