BREAKING NEWS

ಮುಂದುವರಿದ ವ್ಯಾಘ್ರ ದಾಳಿ: ಆತಂಕದಲ್ಲಿ ಜನತೆ.

ಹನಗೋಡು ; ಹಸುವೊಂದು ಮೇವು ಮೇಯ್ಯುವಾಗ ಇಂದು ಮಧ್ಯಾಹ್ನ  ದಾಳಿ ಮಾಡಿ ಬಲಿ ತೆಗೆದುಕೊಂಡಿರುವ ಘಟನೆ  ಹನಗೋಡು ಸಮೀಪದ ಬಿ ಆರ್ ಕಾವಲು ಅರಣ್ಯದಲ್ಲಿ ನಡೆದಿದೆ.

ಗೌಡಿಕೆರೆ ಗ್ರಾಮದ ಶೇಖರ್ ಎಂಬುವವರಿಗೆ ಸೇರಿದ ಹಸುವನ್ನು ಕೊಂದಿರುವ ಹುಲಿ ಸುಮಾರು ಅಂದಾಜು 200 ಮೀ. ನಷ್ಟು ಎಳೆದೊಯ್ದು ಬಿಟ್ಟು ಹೋಗಿದೆ. ಹಸುವಿನ ಮಾಲೀಕ ಶೇಖರ್ ಮೇವು ಮೇಯ್ಯುವ ಜಾಗಕ್ಕೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಎರಡು ತಿಂಗಳ ಹಿಂದೆ ಹಸುವೊಂದನ್ನು ಹುಲಿ ಗಾಯಗೊಳಿಸಿ ಬಿಟ್ಟು ಹೋಗಿತ್ತು. ಈ ಹಸು ಈಗ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸತತ ಎರಡು ದಿನ ಹುಲಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜನತೆ ಆತಂಕಗೊಂಡಿದ್ದು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ತೋಟಗಳಿಗೆ ಕೆಲಸಕ್ಕೆ ತೆರಳುವ ಕಾರ್ಮಿಕರು ಭಯಭೀತರಾಗಿದ್ದಾರೆ.

ಅರಣ್ಯ ಇಲಾಖೆಯ ಅಧಿಕಾರಿ ಸಿದ್ಧರಾಜು ಸ್ಥಳಕ್ಕೆ ಭೇಟಿ ನೀಡಿ ಇಲಾಖೆಯಿಂದ ಬರುವ ಪರಿಹಾರ ಧನವನ್ನು ಕೂಡಲೇ ನೀಡಲಾಗುವುದು ಎಂದು ತಿಳಿಸಿದರು.

ಈ ವ್ಯಾಪ್ತಿಯಲ್ಲಿ ನಿಲ್ಲದ ಹುಲಿ ಅಟ್ಟಹಾಸ ; ನಾಲ್ಕು ಹಸುಗಳು ಬಲಿ
ಭಯ ಹುಟ್ಟಿಸಿದ ಹುಲಿ ಹೆಜ್ಜೆ: ಬಿಲ್ಲೆನಹೊಸಹಳ್ಳಿ ಕೊಳವಿಗೆ ನೇಗತ್ತೂರು ಹೀಗೆ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆತಂಕ ಮನೆ ಮಾಡಿದ್ದು.ತಕ್ಷಣ ಹುಲಿ ಹಿಡಿಯಲು ಕ್ರಮ ವಹಿಸಬೇಕು ಎಂದು ಗ್ರಾಂ ಪಂ ಸದಸ್ಯ ಎಚ್‌ ಪಿ ಶಿವಣ್ಣ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ

andolana

Recent Posts

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

4 mins ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

9 mins ago

ತಮಿಳುನಾಡು | ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ; 20 ಮಂದಿ ಸಾವು, ಹಲವರು ಗಂಭೀರ

ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…

17 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

1 hour ago

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…

2 hours ago

ಯಾವ ನಾಯಕರು ಜೆಡಿಎಸ್‌ ಸಂಪರ್ಕಿಸಿಲ್ಲ ; ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

ನವದೆಹಲಿ : ಜಾತ್ಯತೀತ ಜನತಾದಳದ ಜೊತೆಗೆ ಯಾವ ರಾಜಕೀಯ ನಾಯಕರೂ ಸಂಪರ್ಕ ಸಾಧಿಸಿಲ್ಲ. ಈ ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ…

2 hours ago