BREAKING NEWS

ರಣಹೇಡಿಗಳ ವಿಚಾರ ಮಕ್ಕಳ ಪಠ್ಯಪುಸ್ತಕದಲ್ಲಿ ಇಡಲು ಬಿಡುವುದಿಲ್ಲ: ಬಿ.ಕೆ.ಹರಿಪ್ರಸಾದ್

ಶಿವಮೊಗ್ಗ: ಲಕ್ಷಾಂತರ ಮಂದಿ ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ತಂದಿದ್ದಾರೆ. ಅ ಹೋರಾಟ ಮಾಡಿದವರಿಗೆ ಅಪಮಾನ ಮಾಡುತ್ತಿದ್ದಾರೆ. ಬ್ರಿಟಿಷರಿಗೆ ಆರು ಬಾರಿ ಕ್ಷಮಾಪಣೆ ಪತ್ರ ಯಾಕೆ ಕೊಟ್ಟರು ಎಂದು ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರು ಮೊದಲು ಹೇಳಲಿ. ಅವರ ಚಿತ್ರಗುಪ್ತ ಪುಸ್ತಕದಲ್ಲೇ ಬ್ರಿಟಿಷರಿಗೆ ಯಾಕೆ ನಾನು ಕ್ಷಮಾಪಣೆ ಕೇಳಿದ್ದೆ ಎಂಬುದರ ಬಗ್ಗೆ ಹೇಳಿಕೊಂಡಿದ್ದಾರೆ. ಇಂತಹ ರಣಹೇಡಿಗಳ ಬಗ್ಗೆ ನಮ್ಮ ಮಕ್ಕಳ ಪಠ್ಯಪುಸ್ತಕದಲ್ಲಿ ಇಡಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಬಿಜೆಪಿ ಅವರು ಎಲೆಕ್ಷನ್ ಅಜೆಂಡವಾಗಿ ಮಾಡಿಕೊಂಡರೆ ಬಹಳ ಸಂತೋಷ. ಈ ಬಾರಿ ಅವರನ್ನು ಜನ ಮನೆಗೆ ಕಳಿಸಿದ್ದಾರೆ. ಮುಂದಿನ ಬಾರಿ ಅವರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದರು.

ಪಠ್ಯಪುಸ್ತಕ ಒಂದೇ ಅಲ್ಲ, ಬಿಜೆಪಿ ಅನೈತಿಕ ಸರ್ಕಾರ ಮಾಡಿದ ನಂತರ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನೇ ಸಂಪೂರ್ಣ ಕೇಸರಿಕರಣ ಮಾಡಲು ಹೊರಟಿದ್ದರು. ಭಾರತ ಸಾವಿರಾರು ವರ್ಷದಿಂದ ಜಾತ್ಯತೀತ ರಾಷ್ಟ್ರವಾಗಿ ಉಳಿದುಕೊಂಡಿದೆ. ಇದರ ಅರಿವಿಲ್ಲದೇ ವ್ಯವಸ್ಥೆ ಬುಡಮೇಲು ಮಾಡಲು ಬಿಜೆಪಿ ಹೊರಟಿತ್ತು. ಎಲ್ಲಾ ಕಡೆ ಬಿಜೆಪಿ, ಆರ್ ಎಸ್ಎಸ್ ತಮ್ಮ ಸಿದ್ದಾಂತವನ್ನು ತೂರಲು ಪ್ರಯತ್ನ ಮಾಡಿದ್ದಾರೆ. ಆ ಎಲ್ಲಾ ಕ್ಷೇತ್ರದಲ್ಲೂ ಸರಿ ಮಾಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತದೆ ಎಂದರು.

ಹೆಡ್ಗೇವಾರ್ ಪಠ್ಯಪುಸ್ತಕ ಕೈ ಬಿಡುವ ವಿಚಾರವಾಗಿ ಮಾತನಾಡಿ, ಹೆಡ್ಗೇವಾರ್ ಸ್ವಾತಂತ್ರ್ಯ ಹೋರಾಟಗಾರ ಎಂದು ಮೊದಲು ಸಾಬೀತುಪಡಿಸಲಿ. ಬ್ರಿಟಿಷರ ಬಳಿ ಕ್ಷಮೆ ಕೇಳಿದ ನಕಲಿ ಸ್ವತಂತ್ರ ಹೋರಾಟಗಾರರಿಗೆ ಮನ್ನಣೆ ನೀಡುವುದಾದರೆ ಹೇಗೆ? ಗೋಡ್ಸೆ ಕೂಡ ರಾಷ್ಟ್ರಭಕ್ತ ಎಂದು ಯಾರೋ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರ ರಾಷ್ಟ್ರಭಕ್ತಿಗೂ, ಜನಸಾಮಾನ್ಯರ ರಾಷ್ಟ್ರಭಕ್ತಿಗೂ ಬಹಳಷ್ಟು ವ್ಯತ್ಯಾಸವಿದೆ ಎಂದರು.

ನೈತಿಕ ಪೊಲೀಸ್ ಗಿರಿ ವಿಚಾರವಾಗಿ ಮಾತನಾಡಿ, ನೈತಿಕ ಪೊಲೀಸ್ ಗಿರಿ ಇರುವುದು ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಾತ್ರ. ಬಜರಂಗದಳ ವಿಚಾರದ ಬಗ್ಗೆ ನಮ್ಮ ನಿಲುವನ್ನ ನಾವು ಸ್ಪಷ್ಟಪಡಿಸಿದ್ದೇವೆ. ಬಜರಂಗ ದಳದ ಹೆಸರು ಅವರು ಹೇಳಿದ್ದಕ್ಕೆ ಜನ ಸೋಲಿಸಿ ಕಳಿಸಿದ್ದಾರೆ. ಬಜರಂಗ ಬಲಿ, ಬಜರಂಗದಳ ಅಂತ ಹೇಳಿದ್ದಕ್ಕೆ ನೀವು ಯೋಗ್ಯರಲ್ಲ ಅಂದು ಜನ ತೀರ್ಮಾನಿಸಿದ್ದಾರೆ. ಇವೆಲ್ಲಾ ಬಿಟ್ಟು ಜನರ ಬದುಕಿನ ಬಗ್ಗೆ ಹಾಗೂ ಜನರ ಕಲ್ಯಾಣದ ಬಗ್ಗೆ ಕಾರ್ಯಕ್ರಮ ಮಾಡಬೇಕು. ಇನ್ನು ಮುಂದಾದರೂ ಕೂಡ ಕರ್ನಾಟಕವನ್ನು ಸರ್ವ ಜನ ಸಮಭಾವವೆಂದು ಹೇಳುತ್ತೇವೆ ಅದಕ್ಕೆ ಗೌರವ ಕೊಟ್ಟು ಬಾಳುವುದು ಒಳ್ಳೆಯದು ಎಂದರು.

andolanait

Recent Posts

ಮಾರ್ಚ್.‌3ರಂದು ರಕ್ತಚಂದ್ರಗ್ರಹಣ: ರಾಜ್ಯದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾರ್ಚ್.‌3ರಂದು ಕೇತುಗ್ರಸ್ತ ಚಂದ್ರಗ್ರಹಣ ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ…

22 mins ago

ಮಡಿಕೇರಿ| ಯುವಕರ ಮೇಲೆ ಹಲ್ಲೆ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ಮಡಿಕೇರಿ: ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಸಂಗಮ ಕಾರ್ಯಕ್ರಮದ ಕುರಿತು ನಿನ್ನೆ ವಾಹನದಲ್ಲಿ ಪ್ರಚಾರ ಮಾಡುತ್ತಿದ್ದ ಗೌತಮ್‌ ಎಂಬಾತನ…

33 mins ago

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

1 hour ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

5 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

5 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

5 hours ago