ಶಿವಮೊಗ್ಗ: ಲಕ್ಷಾಂತರ ಮಂದಿ ಪ್ರಾಣತ್ಯಾಗ ಮಾಡಿ ಸ್ವಾತಂತ್ರ್ಯ ತಂದಿದ್ದಾರೆ. ಅ ಹೋರಾಟ ಮಾಡಿದವರಿಗೆ ಅಪಮಾನ ಮಾಡುತ್ತಿದ್ದಾರೆ. ಬ್ರಿಟಿಷರಿಗೆ ಆರು ಬಾರಿ ಕ್ಷಮಾಪಣೆ ಪತ್ರ ಯಾಕೆ ಕೊಟ್ಟರು ಎಂದು ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರು ಮೊದಲು ಹೇಳಲಿ. ಅವರ ಚಿತ್ರಗುಪ್ತ ಪುಸ್ತಕದಲ್ಲೇ ಬ್ರಿಟಿಷರಿಗೆ ಯಾಕೆ ನಾನು ಕ್ಷಮಾಪಣೆ ಕೇಳಿದ್ದೆ ಎಂಬುದರ ಬಗ್ಗೆ ಹೇಳಿಕೊಂಡಿದ್ದಾರೆ. ಇಂತಹ ರಣಹೇಡಿಗಳ ಬಗ್ಗೆ ನಮ್ಮ ಮಕ್ಕಳ ಪಠ್ಯಪುಸ್ತಕದಲ್ಲಿ ಇಡಲು ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಬಿಜೆಪಿ ಅವರು ಎಲೆಕ್ಷನ್ ಅಜೆಂಡವಾಗಿ ಮಾಡಿಕೊಂಡರೆ ಬಹಳ ಸಂತೋಷ. ಈ ಬಾರಿ ಅವರನ್ನು ಜನ ಮನೆಗೆ ಕಳಿಸಿದ್ದಾರೆ. ಮುಂದಿನ ಬಾರಿ ಅವರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ ಎಂದರು.
ಹೆಡ್ಗೇವಾರ್ ಪಠ್ಯಪುಸ್ತಕ ಕೈ ಬಿಡುವ ವಿಚಾರವಾಗಿ ಮಾತನಾಡಿ, ಹೆಡ್ಗೇವಾರ್ ಸ್ವಾತಂತ್ರ್ಯ ಹೋರಾಟಗಾರ ಎಂದು ಮೊದಲು ಸಾಬೀತುಪಡಿಸಲಿ. ಬ್ರಿಟಿಷರ ಬಳಿ ಕ್ಷಮೆ ಕೇಳಿದ ನಕಲಿ ಸ್ವತಂತ್ರ ಹೋರಾಟಗಾರರಿಗೆ ಮನ್ನಣೆ ನೀಡುವುದಾದರೆ ಹೇಗೆ? ಗೋಡ್ಸೆ ಕೂಡ ರಾಷ್ಟ್ರಭಕ್ತ ಎಂದು ಯಾರೋ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರ ರಾಷ್ಟ್ರಭಕ್ತಿಗೂ, ಜನಸಾಮಾನ್ಯರ ರಾಷ್ಟ್ರಭಕ್ತಿಗೂ ಬಹಳಷ್ಟು ವ್ಯತ್ಯಾಸವಿದೆ ಎಂದರು.
ನೈತಿಕ ಪೊಲೀಸ್ ಗಿರಿ ವಿಚಾರವಾಗಿ ಮಾತನಾಡಿ, ನೈತಿಕ ಪೊಲೀಸ್ ಗಿರಿ ಇರುವುದು ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಾತ್ರ. ಬಜರಂಗದಳ ವಿಚಾರದ ಬಗ್ಗೆ ನಮ್ಮ ನಿಲುವನ್ನ ನಾವು ಸ್ಪಷ್ಟಪಡಿಸಿದ್ದೇವೆ. ಬಜರಂಗ ದಳದ ಹೆಸರು ಅವರು ಹೇಳಿದ್ದಕ್ಕೆ ಜನ ಸೋಲಿಸಿ ಕಳಿಸಿದ್ದಾರೆ. ಬಜರಂಗ ಬಲಿ, ಬಜರಂಗದಳ ಅಂತ ಹೇಳಿದ್ದಕ್ಕೆ ನೀವು ಯೋಗ್ಯರಲ್ಲ ಅಂದು ಜನ ತೀರ್ಮಾನಿಸಿದ್ದಾರೆ. ಇವೆಲ್ಲಾ ಬಿಟ್ಟು ಜನರ ಬದುಕಿನ ಬಗ್ಗೆ ಹಾಗೂ ಜನರ ಕಲ್ಯಾಣದ ಬಗ್ಗೆ ಕಾರ್ಯಕ್ರಮ ಮಾಡಬೇಕು. ಇನ್ನು ಮುಂದಾದರೂ ಕೂಡ ಕರ್ನಾಟಕವನ್ನು ಸರ್ವ ಜನ ಸಮಭಾವವೆಂದು ಹೇಳುತ್ತೇವೆ ಅದಕ್ಕೆ ಗೌರವ ಕೊಟ್ಟು ಬಾಳುವುದು ಒಳ್ಳೆಯದು ಎಂದರು.
ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ…
ಮಹಾದೇಶ್ ಎಂ ಗೌಡ ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು…
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬಳ್ಳಾರಿ ಹಿಂಸಾಚಾರಕ್ಕೆ ರಾಜಕೀಯ ಅಸೂಯೆ ಕಾರಣ ಎಂದು ಕಾಂಗ್ರೆಸ್ನ ಸತ್ಯಶೋಧನಾ…
ರಾಮನಗರ: ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡುಹಂದಿ ಬೇಟೆಗಾಗಿ ನಾಡಬಾಂಬ್ ಇಟ್ಟಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.…
ಬೆಂಗಳೂರು: ರಾಜ್ಯಪಾಲರು ದ್ವೇಷಭಾಷಣ ಬಿಲ್ ಸ್ವೀಕಾರವೂ ಮಾಡಿಲ್ಲ. ತಿರಸ್ಕಾರವೂ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು…
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ಬಂದು…