ರೂರ್ಕಿ(ಉತ್ತರಾಖಂಡ): ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಿಂದ ಮನೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ.
ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ದೆಹಲಿಗೆ ರೆಫರ್ ಮಾಡಲಾಗಿದೆ. ಅಲ್ಲಿ ಅವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ಖಾನ್ಪುರ ಶಾಸಕ ಉಮೇಶ್ ಕುಮಾರ್, ಪಂತ್ ಅವರ ಆರೋಗ್ಯ ಸ್ಥಿತಿ ತಿಳಿಯಲು ಆಸ್ಪತ್ರೆಗೆ ಆಗಮಿಸಿದ್ದರು.
ಕಾಲಿಗೆ ಗಂಭೀರ ಗಾಯ: ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯವಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಭ್ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ರವಾನಿಸಲಾಗಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಸುಶೀಲ್ ನಗರ್ ತಿಳಿಸಿದ್ದಾರೆ. ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…