BREAKING NEWS

ಕ್ರಿಕೆಟಿಗ ರಿಷಭ್​​​ ಪಂತ್​ ಕಾರು ಅಪಘಾತ : ಪರಿಸ್ಥಿತಿ ಗಂಭೀರ

ರೂರ್ಕಿ(ಉತ್ತರಾಖಂಡ): ಭಾರತ ಕ್ರಿಕೆಟ್ ತಂಡದ ಆಟಗಾರ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಿಂದ ಮನೆಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಭಸ್ಮವಾಗಿದೆ.

ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಅವರ ಕಾರು ಅಪಘಾತಕ್ಕೀಡಾಗಿದೆ. ವಿಕೆಟ್​ ಕೀಪರ್​ ರಿಷಭ್ ಪಂತ್​​ ಅವರನ್ನು ದೆಹಲಿಗೆ ರೆಫರ್ ಮಾಡಲಾಗಿದೆ. ಅಲ್ಲಿ ಅವರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗುವುದು. ಖಾನ್‌ಪುರ ಶಾಸಕ ಉಮೇಶ್‌ ಕುಮಾರ್‌, ಪಂತ್​ ಅವರ ಆರೋಗ್ಯ ಸ್ಥಿತಿ ತಿಳಿಯಲು ಆಸ್ಪತ್ರೆಗೆ ಆಗಮಿಸಿದ್ದರು.

ಕಾಲಿಗೆ ಗಂಭೀರ ಗಾಯ: ರಿಷಭ್​ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯವಾಗಿದೆ. ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ದೇಹತ್ ಸ್ವಪ್ನಾ ಕಿಶೋರ್ ಸಿಂಗ್ ಅವರು ಸ್ಥಳಕ್ಕೆ ಧಾವಿಸಿದ್ದಾರೆ. ಸದ್ಯ ರಿಷಭ್​ ಪಂತ್ ಅವರ ಸ್ಥಿತಿ ಸ್ಥಿರವಾಗಿದ್ದು, ಅವರನ್ನು ರೂರ್ಕಿಯಿಂದ ದೆಹಲಿಗೆ ರವಾನಿಸಲಾಗಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಸುಶೀಲ್ ನಗರ್ ತಿಳಿಸಿದ್ದಾರೆ. ಅಲ್ಲಿ ಅವರ ಪ್ಲಾಸ್ಟಿಕ್ ಸರ್ಜರಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

3 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

3 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

3 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

16 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

17 hours ago