BREAKING NEWS

ಮೋದಿ ಉಪನಾಮ ಟೀಕೆ: ಏ.25ರಂದು ರಾಹುಲ್‌ ಖುದ್ದು ಹಾಜರಿಗೆ ಪಟ್ನಾ ಕೋರ್ಟ್‌ ನೋಟಿಸ್‌

ಪಟ್ನಾ (ಪಿಟಿಐ): ‘ಮೋದಿ’ ಉಪ ನಾಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣ ಸಂಬಂಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಬಿಹಾರದ ಪಟ್ನಾ ಕೋರ್ಟ್‌ ಇದೇ 25ರಂದು ಖುದ್ದು ಹಾಜರಾಗಲು ಬುಧವಾರ ನೋಟಿಸ್‌ ನೀಡಿದೆ.

ಬಿಜೆಪಿಯ ರಾಜ್ಯಸಭೆ ಸದಸ್ಯ ಮತ್ತು ಮಾಜಿ ಉಪ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ ಅವರು ರಾಹುಲ್‌ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದ ಸ್ಪೆಷಲ್‌ ಜ್ಯುಡಿಷಿಯಲ್‌ ಮ್ಯಾಜಿಸ್ಟ್ರೇಟ್‌ ಆದಿ ದೇವ್‌ ಅವರು ಏಪ್ರಿಲ್‌ 12ರಂದು ರಾಹುಲ್‌ ಗಾಂಧಿ ಅವರ ಖುದ್ದು ಹಾಜರಾತಿಗೆ ಕಳೆದ ಮಾರ್ಚ್‌ 18ರಂದು ಆದೇಶ ಹೊರಡಿಸಿದ್ದರು. ಆದರೆ, ಬುಧವಾರದ ವಿಚಾರಣೆಯಲ್ಲಿ ರಾಹುಲ್‌ ಗಾಂಧಿ ಅವರ ವಕೀಲರು, ಇಡೀ ತಂಡ ಸೂರತ್‌ ಕೋರ್ಟ್‌ ಆದೇಶದ ಪ್ರಕರಣದಲ್ಲಿ ನಿರತರಾಗಿದ್ದಾರೆ. ಇದರಿಂದ ಖುದ್ದು ಹಾಜರಾತಿಗೆ ಸಮಯಾವಕಾಶ ನೀಡುವಂತೆ ಮನವಿ ಮಾಡಿದರು.

ವಕೀಲರ ಕೋರಿಕೆ ಮಾನ್ಯ ಮಾಡಿದ ನ್ಯಾಯಾಧೀಶರು, ಏ.25ರಂದು ನಡೆಯಲಿರುವ ಪ್ರಕರಣದ ಮುಂದಿನ ವಿಚಾರಣೆಗೆ ರಾಹುಲ್‌ ಗಾಂಧಿ ಖುದ್ದು ಹಾಜರಿರಬೇಕು ಎಂದು ಅವರ ವಕೀಲರಿಗೆ ಸೂಚಿಸಿದರು.

ದೂರುದಾರರ ಹೇಳಿಕೆಗಳನ್ನು ದಾಖಲಿಸಲಾಗಿದೆ. ನ್ಯಾಯಾಲಯಕ್ಕೆ ಸಲ್ಲಿಸಿರುವ ಎಲ್ಲ ಪುರಾವೆಗಳು ಮತ್ತು ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಮಾತ್ರ ದಾಖಲಿಸಬೇಕಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರಾದ ಪ್ರಿಯಾ ಗುಪ್ತಾ ಸುದ್ದಿಗಾರರಿಗೆ ತಿಳಿಸಿದರು.

‘ಮೋದಿ’ ಉಪನಾಮ ಕುರಿತ ಹೇಳಿಕೆಗೆ ಸೂರತ್‌ ಕೋರ್ಟ್‌ ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಅವರು ಲೋಕಸಭಾ ಸದಸ್ಯತ್ವದಿಂದಲೂ ಅನರ್ಹರಾಗಿದ್ದಾರೆ.

andolanait

Recent Posts

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

2 mins ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago