BREAKING NEWS

ತಲೆ ಕತ್ತರಿಸಿ ಹೋಮ ಕುಂಡಕ್ಕೆ ಬೀಳಬೇಕು : ಯಂತ್ರ ನಿರ್ಮಿಸಿದ ದಂಪತಿ ಸ್ವಯಂ ಬಲಿ!

ಗುಜರಾತ್ : ದಂಪತಿ ತಮ್ಮ ತಲೆಯನ್ನು ತಾವೇ ಕಡಿದುಕೊಂಡ ಭಯಾನಕ ಘಟನೆ ಗುಜರಾತ್ ರಾಜ್ಯದ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ವಿಂಚಿಯಾ ಎಂಬ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. 38 ವರ್ಷ ವಯಸ್ಸಿನ ಕೃಷಿಕ ಹಾಗೂ ಆತನ ಪತ್ನಿ ‘ಗಿಲ್ಲೊಟಿನ್’ ಮಾದರಿಯ ಯಂತ್ರಕ್ಕೆ ತಮ್ಮ ತಲೆಯನ್ನು ಕೊಟ್ಟು ಸಾವಿಗೆ ಶರಣಾಗಿದ್ದಾರೆ.
ಫ್ರೆಂಚ್ ಕ್ರಾಂತಿಯ ವೇಳೆ ಗಿಲ್ಲೋಟಿನ್ ಯಂತ್ರ ಕುಖ್ಯಾತವಾಗಿತ್ತು. ರಾಜಕೀಯ ವಿರೋಧಿಗಳ ತಲೆಯನ್ನು ಈ ಯಂತ್ರದಲ್ಲಿ ಇರಿಸಿ ಕತ್ತರಿಸಲಾಗುತ್ತಿತ್ತು. ಈ ಯಂತ್ರದಲ್ಲಿ ತಲೆಯನ್ನು ಕತ್ತರಿಸುವಷ್ಟ ಹರಿತವಾದ ಬ್ಲೇಡ್ ಇರುತ್ತದೆ. ಯಂತ್ರಕ್ಕೆ ತಲೆಯನ್ನು ಇರಿಸಿ ಯಂತ್ರವನ್ನು ಚಾಲನೆ ಮಾಡಿ ರುಂಡ ಹಾಗೂ ಮುಂಡ ಬೇರ್ಪಡುವಂತೆ ಮಾಡಲಾಗುತ್ತಿತ್ತು.

ರಾಜ್‌ಕೋಟ್‌ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ? : ಗಿಲ್ಲೊಟಿನ್ ಮಾದರಿಯ ಯಂತ್ರಕ್ಕೆ ತಮ್ಮ ತಲೆಯನ್ನು ಕೊಟ್ಟು ರಾಜ್‌ಕೋಟ್‌ನ ಕೃಷಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಎಂಬ ವಿಚಾರ ಇದೀಗ ಪೊಲೀಸರಿಗೂ ತಲೆ ನೋವಾಗಿ ಪರಿಣಮಿಸಿದೆ. ಮೂಢನಂಬಿಕೆ, ಮಂತ್ರ – ತಂತ್ರದ ಬಲೆಗೆ ಬಿದ್ದು ಈ ಕೃತ್ಯ ಎಸಗಿದ್ದಾರಾ ಎಂಬ ಅನುಮಾನವೂ ಮೂಡಿದೆ.
ಈ ನಡುವೆ ಪೊಲೀಸರಿಗೆ ಗುಜರಾತಿ ಭಾಷೆಯಲ್ಲಿ ಬರೆದಿರುವ ಆತ್ಮಹತ್ಯೆ ಪತ್ರ ಹಾಗೂ ದಂಪತಿಗಳಿಬ್ಬರ ಹೆಬ್ಬೆಟ್ಟು ಮುದ್ರೆ ಕೂಡಾ ಪತ್ತೆಯಾಗಿದೆ. ದಂಪತಿ ತಮ್ಮ ಸಾವಿಗೆ ತಾವೇ ಕಾರಣ ಎಂದು ಹೇಳಿಕೊಂಡಿದ್ಧಾರೆ. ತಮ್ಮ ಸಾವಿಗೆ ಯಾರನ್ನೂ ದೂಷಿಸುವ ಅಗತ್ಯವಿಲ್ಲ ಎಂದೂ ದಂಪತಿ ಮನವಿ ಮಾಡಿದ್ದಾರೆ.

ಮೃತರನ್ನು 38 ವರ್ಷ ವಯಸ್ಸಿನ ಹೇಮು ಮಕ್ವಾನಾ ಹಾಗೂ ಆತನ ಪತ್ನಿ 35 ವರ್ಷ ವಯಸ್ಸಿನ ಹನ್ಸಾ ಮಕ್ವಾನಾ ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದರು. ಈ ಮಕ್ಕಳು ತಮ್ಮ ಪೋಷಕರ ಮೃತ ದೇಹವನ್ನು ಕಂಡು ಕಂಗಾಲಾಗಿ ಕಣ್ಣೀರಿಡುತ್ತಾ ನೆರೆ ಹೊರೆಯವರಿಗೆ ಮಾಹಿತಿ ನೀಡಿದ್ದರು. ಆತ್ಮಹತ್ಯೆಗೆ ಶರಣಾದ ದಂಪತಿ 13 ವರ್ಷದ ಮಗ ಹಾಗೂ 12 ವರ್ಷ ವಯಸ್ಸಿನ ಮಗಳನ್ನು ಅಗಲಿದ್ದಾರೆ. ಮಕ್ಕಳಿಬ್ಬರೂ ತಮ್ಮ ಸಂಬಂಧಿಕರ ಮನೆಯಿಂದ ವಾಪಸ್ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಮೃತ ದೇಹಗಳನ್ನು ರಾಜ್‌ಕೋಟ್‌ನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ದೇಹಗಳ ವಿಧಿವಿಜ್ಞಾನ ಪರೀಕ್ಷೆ ಹಾಗೂ ಮರಣೋತ್ತರ ಪರೀಕ್ಷೆ ನಡೆಯಬೇಕಿದೆ.

lokesh

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

31 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

36 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

46 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago