BREAKING NEWS

ತಲೆ ಕತ್ತರಿಸಿ ಹೋಮ ಕುಂಡಕ್ಕೆ ಬೀಳಬೇಕು : ಯಂತ್ರ ನಿರ್ಮಿಸಿದ ದಂಪತಿ ಸ್ವಯಂ ಬಲಿ!

ಗುಜರಾತ್ : ದಂಪತಿ ತಮ್ಮ ತಲೆಯನ್ನು ತಾವೇ ಕಡಿದುಕೊಂಡ ಭಯಾನಕ ಘಟನೆ ಗುಜರಾತ್ ರಾಜ್ಯದ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ವಿಂಚಿಯಾ ಎಂಬ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. 38 ವರ್ಷ ವಯಸ್ಸಿನ ಕೃಷಿಕ ಹಾಗೂ ಆತನ ಪತ್ನಿ ‘ಗಿಲ್ಲೊಟಿನ್’ ಮಾದರಿಯ ಯಂತ್ರಕ್ಕೆ ತಮ್ಮ ತಲೆಯನ್ನು ಕೊಟ್ಟು ಸಾವಿಗೆ ಶರಣಾಗಿದ್ದಾರೆ.
ಫ್ರೆಂಚ್ ಕ್ರಾಂತಿಯ ವೇಳೆ ಗಿಲ್ಲೋಟಿನ್ ಯಂತ್ರ ಕುಖ್ಯಾತವಾಗಿತ್ತು. ರಾಜಕೀಯ ವಿರೋಧಿಗಳ ತಲೆಯನ್ನು ಈ ಯಂತ್ರದಲ್ಲಿ ಇರಿಸಿ ಕತ್ತರಿಸಲಾಗುತ್ತಿತ್ತು. ಈ ಯಂತ್ರದಲ್ಲಿ ತಲೆಯನ್ನು ಕತ್ತರಿಸುವಷ್ಟ ಹರಿತವಾದ ಬ್ಲೇಡ್ ಇರುತ್ತದೆ. ಯಂತ್ರಕ್ಕೆ ತಲೆಯನ್ನು ಇರಿಸಿ ಯಂತ್ರವನ್ನು ಚಾಲನೆ ಮಾಡಿ ರುಂಡ ಹಾಗೂ ಮುಂಡ ಬೇರ್ಪಡುವಂತೆ ಮಾಡಲಾಗುತ್ತಿತ್ತು.

ರಾಜ್‌ಕೋಟ್‌ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ? : ಗಿಲ್ಲೊಟಿನ್ ಮಾದರಿಯ ಯಂತ್ರಕ್ಕೆ ತಮ್ಮ ತಲೆಯನ್ನು ಕೊಟ್ಟು ರಾಜ್‌ಕೋಟ್‌ನ ಕೃಷಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಎಂಬ ವಿಚಾರ ಇದೀಗ ಪೊಲೀಸರಿಗೂ ತಲೆ ನೋವಾಗಿ ಪರಿಣಮಿಸಿದೆ. ಮೂಢನಂಬಿಕೆ, ಮಂತ್ರ – ತಂತ್ರದ ಬಲೆಗೆ ಬಿದ್ದು ಈ ಕೃತ್ಯ ಎಸಗಿದ್ದಾರಾ ಎಂಬ ಅನುಮಾನವೂ ಮೂಡಿದೆ.
ಈ ನಡುವೆ ಪೊಲೀಸರಿಗೆ ಗುಜರಾತಿ ಭಾಷೆಯಲ್ಲಿ ಬರೆದಿರುವ ಆತ್ಮಹತ್ಯೆ ಪತ್ರ ಹಾಗೂ ದಂಪತಿಗಳಿಬ್ಬರ ಹೆಬ್ಬೆಟ್ಟು ಮುದ್ರೆ ಕೂಡಾ ಪತ್ತೆಯಾಗಿದೆ. ದಂಪತಿ ತಮ್ಮ ಸಾವಿಗೆ ತಾವೇ ಕಾರಣ ಎಂದು ಹೇಳಿಕೊಂಡಿದ್ಧಾರೆ. ತಮ್ಮ ಸಾವಿಗೆ ಯಾರನ್ನೂ ದೂಷಿಸುವ ಅಗತ್ಯವಿಲ್ಲ ಎಂದೂ ದಂಪತಿ ಮನವಿ ಮಾಡಿದ್ದಾರೆ.

ಮೃತರನ್ನು 38 ವರ್ಷ ವಯಸ್ಸಿನ ಹೇಮು ಮಕ್ವಾನಾ ಹಾಗೂ ಆತನ ಪತ್ನಿ 35 ವರ್ಷ ವಯಸ್ಸಿನ ಹನ್ಸಾ ಮಕ್ವಾನಾ ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದರು. ಈ ಮಕ್ಕಳು ತಮ್ಮ ಪೋಷಕರ ಮೃತ ದೇಹವನ್ನು ಕಂಡು ಕಂಗಾಲಾಗಿ ಕಣ್ಣೀರಿಡುತ್ತಾ ನೆರೆ ಹೊರೆಯವರಿಗೆ ಮಾಹಿತಿ ನೀಡಿದ್ದರು. ಆತ್ಮಹತ್ಯೆಗೆ ಶರಣಾದ ದಂಪತಿ 13 ವರ್ಷದ ಮಗ ಹಾಗೂ 12 ವರ್ಷ ವಯಸ್ಸಿನ ಮಗಳನ್ನು ಅಗಲಿದ್ದಾರೆ. ಮಕ್ಕಳಿಬ್ಬರೂ ತಮ್ಮ ಸಂಬಂಧಿಕರ ಮನೆಯಿಂದ ವಾಪಸ್ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಮೃತ ದೇಹಗಳನ್ನು ರಾಜ್‌ಕೋಟ್‌ನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ದೇಹಗಳ ವಿಧಿವಿಜ್ಞಾನ ಪರೀಕ್ಷೆ ಹಾಗೂ ಮರಣೋತ್ತರ ಪರೀಕ್ಷೆ ನಡೆಯಬೇಕಿದೆ.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

11 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

14 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago