BREAKING NEWS

ತಲೆ ಕತ್ತರಿಸಿ ಹೋಮ ಕುಂಡಕ್ಕೆ ಬೀಳಬೇಕು : ಯಂತ್ರ ನಿರ್ಮಿಸಿದ ದಂಪತಿ ಸ್ವಯಂ ಬಲಿ!

ಗುಜರಾತ್ : ದಂಪತಿ ತಮ್ಮ ತಲೆಯನ್ನು ತಾವೇ ಕಡಿದುಕೊಂಡ ಭಯಾನಕ ಘಟನೆ ಗುಜರಾತ್ ರಾಜ್ಯದ ರಾಜ್‌ಕೋಟ್ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ವಿಂಚಿಯಾ ಎಂಬ ತಾಲ್ಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. 38 ವರ್ಷ ವಯಸ್ಸಿನ ಕೃಷಿಕ ಹಾಗೂ ಆತನ ಪತ್ನಿ ‘ಗಿಲ್ಲೊಟಿನ್’ ಮಾದರಿಯ ಯಂತ್ರಕ್ಕೆ ತಮ್ಮ ತಲೆಯನ್ನು ಕೊಟ್ಟು ಸಾವಿಗೆ ಶರಣಾಗಿದ್ದಾರೆ.
ಫ್ರೆಂಚ್ ಕ್ರಾಂತಿಯ ವೇಳೆ ಗಿಲ್ಲೋಟಿನ್ ಯಂತ್ರ ಕುಖ್ಯಾತವಾಗಿತ್ತು. ರಾಜಕೀಯ ವಿರೋಧಿಗಳ ತಲೆಯನ್ನು ಈ ಯಂತ್ರದಲ್ಲಿ ಇರಿಸಿ ಕತ್ತರಿಸಲಾಗುತ್ತಿತ್ತು. ಈ ಯಂತ್ರದಲ್ಲಿ ತಲೆಯನ್ನು ಕತ್ತರಿಸುವಷ್ಟ ಹರಿತವಾದ ಬ್ಲೇಡ್ ಇರುತ್ತದೆ. ಯಂತ್ರಕ್ಕೆ ತಲೆಯನ್ನು ಇರಿಸಿ ಯಂತ್ರವನ್ನು ಚಾಲನೆ ಮಾಡಿ ರುಂಡ ಹಾಗೂ ಮುಂಡ ಬೇರ್ಪಡುವಂತೆ ಮಾಡಲಾಗುತ್ತಿತ್ತು.

ರಾಜ್‌ಕೋಟ್‌ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ? : ಗಿಲ್ಲೊಟಿನ್ ಮಾದರಿಯ ಯಂತ್ರಕ್ಕೆ ತಮ್ಮ ತಲೆಯನ್ನು ಕೊಟ್ಟು ರಾಜ್‌ಕೋಟ್‌ನ ಕೃಷಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಎಂಬ ವಿಚಾರ ಇದೀಗ ಪೊಲೀಸರಿಗೂ ತಲೆ ನೋವಾಗಿ ಪರಿಣಮಿಸಿದೆ. ಮೂಢನಂಬಿಕೆ, ಮಂತ್ರ – ತಂತ್ರದ ಬಲೆಗೆ ಬಿದ್ದು ಈ ಕೃತ್ಯ ಎಸಗಿದ್ದಾರಾ ಎಂಬ ಅನುಮಾನವೂ ಮೂಡಿದೆ.
ಈ ನಡುವೆ ಪೊಲೀಸರಿಗೆ ಗುಜರಾತಿ ಭಾಷೆಯಲ್ಲಿ ಬರೆದಿರುವ ಆತ್ಮಹತ್ಯೆ ಪತ್ರ ಹಾಗೂ ದಂಪತಿಗಳಿಬ್ಬರ ಹೆಬ್ಬೆಟ್ಟು ಮುದ್ರೆ ಕೂಡಾ ಪತ್ತೆಯಾಗಿದೆ. ದಂಪತಿ ತಮ್ಮ ಸಾವಿಗೆ ತಾವೇ ಕಾರಣ ಎಂದು ಹೇಳಿಕೊಂಡಿದ್ಧಾರೆ. ತಮ್ಮ ಸಾವಿಗೆ ಯಾರನ್ನೂ ದೂಷಿಸುವ ಅಗತ್ಯವಿಲ್ಲ ಎಂದೂ ದಂಪತಿ ಮನವಿ ಮಾಡಿದ್ದಾರೆ.

ಮೃತರನ್ನು 38 ವರ್ಷ ವಯಸ್ಸಿನ ಹೇಮು ಮಕ್ವಾನಾ ಹಾಗೂ ಆತನ ಪತ್ನಿ 35 ವರ್ಷ ವಯಸ್ಸಿನ ಹನ್ಸಾ ಮಕ್ವಾನಾ ಎಂದು ಗುರುತಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದರು. ಈ ಮಕ್ಕಳು ತಮ್ಮ ಪೋಷಕರ ಮೃತ ದೇಹವನ್ನು ಕಂಡು ಕಂಗಾಲಾಗಿ ಕಣ್ಣೀರಿಡುತ್ತಾ ನೆರೆ ಹೊರೆಯವರಿಗೆ ಮಾಹಿತಿ ನೀಡಿದ್ದರು. ಆತ್ಮಹತ್ಯೆಗೆ ಶರಣಾದ ದಂಪತಿ 13 ವರ್ಷದ ಮಗ ಹಾಗೂ 12 ವರ್ಷ ವಯಸ್ಸಿನ ಮಗಳನ್ನು ಅಗಲಿದ್ದಾರೆ. ಮಕ್ಕಳಿಬ್ಬರೂ ತಮ್ಮ ಸಂಬಂಧಿಕರ ಮನೆಯಿಂದ ವಾಪಸ್ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಮೃತ ದೇಹಗಳನ್ನು ರಾಜ್‌ಕೋಟ್‌ನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ದೇಹಗಳ ವಿಧಿವಿಜ್ಞಾನ ಪರೀಕ್ಷೆ ಹಾಗೂ ಮರಣೋತ್ತರ ಪರೀಕ್ಷೆ ನಡೆಯಬೇಕಿದೆ.

lokesh

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

10 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

10 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

10 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

10 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

10 hours ago