BREAKING NEWS

ಸಿಡಬ್ಲ್ಯೂಆರ್‌ಸಿ ನಿರ್ದೇಶನ ಕರ್ನಾಟಕ ಪಾಲಿಗೆ ದೊಡ್ಡ ಹಿನ್ನಡೆ: ಬಿಜೆಪಿ-ಜೆಡಿಎಸ್ ಆಕ್ರೋಶ

ಬೆಂಗಳೂರು: ಸೆಪ್ಚೆಂಬರ್ 28 ಅಂದರೆ ನಾಳೆಯಿಂದ 18 ದಿನಗಳ ಕಾಲ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ರಾಜ್ಯಕ್ಕೆ ನಿರ್ದೇಶನ ನೀಡಿರುವುದು ಕರ್ನಾಟಕಕ್ಕೆ ಹಿನ್ನಡೆಯಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಬಣ್ಣಿಸಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ರಾಜ್ಯ ಸರ್ಕಾರವನ್ನು ವಿಪಕ್ಷಗಳ ನಾಯಕರು ಒತ್ತಾಯಿಸಿದ್ದಾರೆ.

ಕರ್ನಾಟಕವು ಸತತ ಹಿನ್ನಡೆಗಳನ್ನು ಎದುರಿಸುತ್ತಿದೆ ಮತ್ತು ಸಿಡಬ್ಲ್ಯೂಆರ್‌ಸಿ ನಿರ್ದೇಶನವು ಕರ್ನಾಟಕ ಪಾಲಿಗೆ ಮರಣಶಾಸನ ಎಂದು ಹೆಚ್ ಡಿ ಕುಮಾರಸ್ವಾಮಿ ಬಣ್ಣಿಸಿದ್ದಾರೆ. ಕಾವೇರಿ ಜಲಾಶಯಗಳಿಗೆ ಪ್ರತಿನಿತ್ಯ 10 ಸಾವಿರ ಕ್ಯೂಸೆಕ್ ಒಳಹರಿವು ಬರುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಿದ್ದರೆ, ರಾಜ್ಯಕ್ಕೆ ನೀರಿಲ್ಲ ಎಂದು ಸಿಡಬ್ಲ್ಯುಆರ್‌ಸಿ ಸಭೆಯಲ್ಲಿ ಅಧಿಕಾರಿಗಳು ವ್ಯತಿರಿಕ್ತ ಹೇಳಿಕೆ ನೀಡಿದ್ದಾರೆ ಎಂದು ಹೇಳಿದರು.

ಜಲಸಂಪನ್ಮೂಲ ಇಲಾಖೆ ಮತ್ತು ಸರ್ಕಾರದ ನಡುವೆ ಯಾವುದೇ ಸಮನ್ವಯವಿಲ್ಲ, ತಮಿಳುನಾಡು ರಾಜ್ಯ ಕರ್ನಾಟಕದ ವೈಫಲ್ಯಗಳನ್ನು ಬುದ್ಧಿವಂತಿಕೆಯಿಂದ ಬಳಸಿಕೊಳ್ಳುತ್ತಿದೆ ಎಂದು ಅವರು ಹೇಳಿದರು.

ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಇಂತಹ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಬಿಜೆಪಿ ಮುಖಂಡ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ. ರಾಜ್ಯವು ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತದೆ. ಸರ್ಕಾರವು ಜನರ ಅದರಲ್ಲೂ ರೈತರ ವಿಶ್ವಾಸವನ್ನು ಕಳೆದುಕೊಂಡಿದೆ. ರಾಜ್ಯ ಸರಕಾರ ಜನರ ತಾಳ್ಮೆ ಪರೀಕ್ಷಿಸುವುದು ಸರಿಯಲ್ಲ ಎಂದರು.

ನಿನ್ನೆ ಬೆಂಗಳೂರು ಪ್ರತಿಭಟನೆ ವೇಳೆ ಹಲವು ಮುಖಂಡರನ್ನು ಪೊಲೀಸರು ಬಂಧಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಭಟನೆಯನ್ನು ಹತ್ತಿಕ್ಕುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳಿಗೆ ನಿತ್ಯ 10 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎಂಬ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಿಡಬ್ಲ್ಯುಆರ್‌ಸಿ ಸಭೆ ನಡೆಯುತ್ತಿರುವಾಗ ಇಂತಹ ಹೇಳಿಕೆ ನೀಡುವ ಅಗತ್ಯ ಏನಿತ್ತು? ಇಂತಹ ಹೇಳಿಕೆಗಳಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.

ಸ್ಟಾಲಿನ್ ಭೇಟಿ ಮಾಡಲಿರುವ ಬಿಜೆಪಿ ಸಂಸದರು: ಚೆನ್ನೈನಲ್ಲಿರುವ ಬಿಜೆಪಿ ಸಂಸದ ಲೆಹರ್ ಸಿಂಗ್ ಸಿರೋಯಾ ಅವರು ಇಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಅವರಿಗೆ ಕರ್ನಾಟಕದ ಪರಿಸ್ಥಿತಿಯನ್ನು ವಿವರಿಸುತ್ತೇನೆ ಎಂದು ಸಿಂಗ್ ಹೇಳಿದರು. ನಾನು ಅವರಿಗೆ ಪತ್ರ ಬರೆದು ಇಮೇಲ್ ಕೂಡ ಕಳುಹಿಸಿದ್ದೆ, ಕರ್ನಾಟಕದಲ್ಲಿ ಸಾಕಷ್ಟು ತಮಿಳು ಮಾತನಾಡುವ ಜನರು ನೀರಿನ ಕೊರತೆಯಿಂದ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಅವರಿಗೆ ವಿವರಿಸುತ್ತೇನೆ ಎಂದಿದ್ದಾರೆ.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

31 mins ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

5 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

5 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

6 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

6 hours ago