BREAKING NEWS

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ಜನವರಿ ಅಂತ್ಯದವರೆಗೂ ನೀರು ಹರಿಸುವಂತೆ ಸೂಚಿಸಿದ ಸಿಡಬ್ಲ್ಯುಆರ್‌ಸಿ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್‌ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್‌ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ.

ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ ಹಾಗೂ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಕೊರತೆ ಉಂಟಾಗುವ ಪರಿಸ್ಥಿತಿ ಇದೆ ಎಂದು ಕರ್ನಾಟಕ ವಾದ ಮಂಡಿಸಿದರೂ ಸಹ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿನ ಪರವೇ ಸೂಚನೆ ನೀಡಿದೆ.

ಕರ್ನಾಟಕದ ವಾದದಲ್ಲಿ ಏನೇನಿತ್ತು?

* ಡಿಸೆಂಬರ್‌ 18ರವರೆಗೂ ಕರ್ನಾಟಕದ 4 ಜಲಾಶಯಗಳಿಗೆ ಶೇ. 52.84ರಷ್ಟಿದೆ.
* ತಮಿಳುನಾಡಿದ ಕಾವೇರಿ ಜಲಾನಯನ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್‌ನಲ್ಲಿ ಸಮತೋಲನ ಮಳೆಯನ್ನು ಕಾಣಬಹುದಾಗಿದೆ. ಆದ್ದರಿಂದ ಅಲ್ಲಿನ ಬೆಳೆಗಳಿಗೆ ಬೇಕಾದ ತೇವಾಂಶವಿದೆ.
* ತಮಿಳುನಾಡಿನ ಕುರುವಾಯಿ ಬೆಳೆ ಡಿಸೆಂಬರ್‌ ಮೊದಲ ವಾರದಲ್ಲಿಯೇ ಕಟಾವಾಗಿರುವುದರಿಂದ ಈ ಬೆಳೆಗಳಿಗೆ ನೀರಿನ ಅಗತ್ಯವಿಲ್ಲ.
* ಮಟ್ಟೂರು ಹಾಗೂ ಭವಾನಿ ಸಾಗರ ಜಲಾಶಯಗಳು 50.36 ಟಿಎಂಸಿ ನೀರನ್ನು ಹೊಂದಿದ್ದು, ಇದು ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚಿನದ್ದಾಗಿದೆ.
* ಕರ್ನಾಟಕದ ಜಲಾಶಯಗಳ ಒಳಹರಿವು ಸ್ಥಗಿತಗೊಂಡಿದ್ದು, ಯಾವುದೇ ಒಳಹರಿವಿನ ನಿರೀಕ್ಷೆಯಿಲ್ಲ. ಅಲ್ಲದೇ ಕರ್ನಾಟಕವು ಪ್ರಸ್ತುತ ಬೆಳೆದಿರುವ ಬೆಳೆಗಳಿಗೆ, ಕುಡಿಯುವ ನೀರಿಗೆ ಮತ್ತು ಕೈಗಾರಿಕೆಗಳಿಗೆ ಈಗಿರುವ ನೀರಿನ ಸಂಗ್ರಹದಿಂದ ನಿರ್ವಹಿಸಬೇಕಿದೆ.

andolana

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

2 hours ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

2 hours ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

2 hours ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

2 hours ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

2 hours ago