BREAKING NEWS

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ಜನವರಿ ಅಂತ್ಯದವರೆಗೂ ನೀರು ಹರಿಸುವಂತೆ ಸೂಚಿಸಿದ ಸಿಡಬ್ಲ್ಯುಆರ್‌ಸಿ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್‌ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್‌ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ.

ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ ಹಾಗೂ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಕೊರತೆ ಉಂಟಾಗುವ ಪರಿಸ್ಥಿತಿ ಇದೆ ಎಂದು ಕರ್ನಾಟಕ ವಾದ ಮಂಡಿಸಿದರೂ ಸಹ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿನ ಪರವೇ ಸೂಚನೆ ನೀಡಿದೆ.

ಕರ್ನಾಟಕದ ವಾದದಲ್ಲಿ ಏನೇನಿತ್ತು?

* ಡಿಸೆಂಬರ್‌ 18ರವರೆಗೂ ಕರ್ನಾಟಕದ 4 ಜಲಾಶಯಗಳಿಗೆ ಶೇ. 52.84ರಷ್ಟಿದೆ.
* ತಮಿಳುನಾಡಿದ ಕಾವೇರಿ ಜಲಾನಯನ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್‌ನಲ್ಲಿ ಸಮತೋಲನ ಮಳೆಯನ್ನು ಕಾಣಬಹುದಾಗಿದೆ. ಆದ್ದರಿಂದ ಅಲ್ಲಿನ ಬೆಳೆಗಳಿಗೆ ಬೇಕಾದ ತೇವಾಂಶವಿದೆ.
* ತಮಿಳುನಾಡಿನ ಕುರುವಾಯಿ ಬೆಳೆ ಡಿಸೆಂಬರ್‌ ಮೊದಲ ವಾರದಲ್ಲಿಯೇ ಕಟಾವಾಗಿರುವುದರಿಂದ ಈ ಬೆಳೆಗಳಿಗೆ ನೀರಿನ ಅಗತ್ಯವಿಲ್ಲ.
* ಮಟ್ಟೂರು ಹಾಗೂ ಭವಾನಿ ಸಾಗರ ಜಲಾಶಯಗಳು 50.36 ಟಿಎಂಸಿ ನೀರನ್ನು ಹೊಂದಿದ್ದು, ಇದು ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚಿನದ್ದಾಗಿದೆ.
* ಕರ್ನಾಟಕದ ಜಲಾಶಯಗಳ ಒಳಹರಿವು ಸ್ಥಗಿತಗೊಂಡಿದ್ದು, ಯಾವುದೇ ಒಳಹರಿವಿನ ನಿರೀಕ್ಷೆಯಿಲ್ಲ. ಅಲ್ಲದೇ ಕರ್ನಾಟಕವು ಪ್ರಸ್ತುತ ಬೆಳೆದಿರುವ ಬೆಳೆಗಳಿಗೆ, ಕುಡಿಯುವ ನೀರಿಗೆ ಮತ್ತು ಕೈಗಾರಿಕೆಗಳಿಗೆ ಈಗಿರುವ ನೀರಿನ ಸಂಗ್ರಹದಿಂದ ನಿರ್ವಹಿಸಬೇಕಿದೆ.

andolana

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

7 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

9 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

9 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

9 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

10 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

11 hours ago