BREAKING NEWS

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ಜನವರಿ ಅಂತ್ಯದವರೆಗೂ ನೀರು ಹರಿಸುವಂತೆ ಸೂಚಿಸಿದ ಸಿಡಬ್ಲ್ಯುಆರ್‌ಸಿ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್‌ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್‌ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ.

ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ ಹಾಗೂ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಕೊರತೆ ಉಂಟಾಗುವ ಪರಿಸ್ಥಿತಿ ಇದೆ ಎಂದು ಕರ್ನಾಟಕ ವಾದ ಮಂಡಿಸಿದರೂ ಸಹ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿನ ಪರವೇ ಸೂಚನೆ ನೀಡಿದೆ.

ಕರ್ನಾಟಕದ ವಾದದಲ್ಲಿ ಏನೇನಿತ್ತು?

* ಡಿಸೆಂಬರ್‌ 18ರವರೆಗೂ ಕರ್ನಾಟಕದ 4 ಜಲಾಶಯಗಳಿಗೆ ಶೇ. 52.84ರಷ್ಟಿದೆ.
* ತಮಿಳುನಾಡಿದ ಕಾವೇರಿ ಜಲಾನಯನ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್‌ನಲ್ಲಿ ಸಮತೋಲನ ಮಳೆಯನ್ನು ಕಾಣಬಹುದಾಗಿದೆ. ಆದ್ದರಿಂದ ಅಲ್ಲಿನ ಬೆಳೆಗಳಿಗೆ ಬೇಕಾದ ತೇವಾಂಶವಿದೆ.
* ತಮಿಳುನಾಡಿನ ಕುರುವಾಯಿ ಬೆಳೆ ಡಿಸೆಂಬರ್‌ ಮೊದಲ ವಾರದಲ್ಲಿಯೇ ಕಟಾವಾಗಿರುವುದರಿಂದ ಈ ಬೆಳೆಗಳಿಗೆ ನೀರಿನ ಅಗತ್ಯವಿಲ್ಲ.
* ಮಟ್ಟೂರು ಹಾಗೂ ಭವಾನಿ ಸಾಗರ ಜಲಾಶಯಗಳು 50.36 ಟಿಎಂಸಿ ನೀರನ್ನು ಹೊಂದಿದ್ದು, ಇದು ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚಿನದ್ದಾಗಿದೆ.
* ಕರ್ನಾಟಕದ ಜಲಾಶಯಗಳ ಒಳಹರಿವು ಸ್ಥಗಿತಗೊಂಡಿದ್ದು, ಯಾವುದೇ ಒಳಹರಿವಿನ ನಿರೀಕ್ಷೆಯಿಲ್ಲ. ಅಲ್ಲದೇ ಕರ್ನಾಟಕವು ಪ್ರಸ್ತುತ ಬೆಳೆದಿರುವ ಬೆಳೆಗಳಿಗೆ, ಕುಡಿಯುವ ನೀರಿಗೆ ಮತ್ತು ಕೈಗಾರಿಕೆಗಳಿಗೆ ಈಗಿರುವ ನೀರಿನ ಸಂಗ್ರಹದಿಂದ ನಿರ್ವಹಿಸಬೇಕಿದೆ.

andolana

Recent Posts

ಬಿಜೆಪಿ ತನ್ನ ತಪ್ಪು ಮರೆಮಾಚಲು ಕೈ ನಾಯಕರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…

3 seconds ago

ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಸ್.ಎನ್.ಹೆಗ್ಡೆ ಇನ್ನಿಲ್ಲ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…

13 mins ago

ಮೈಸೂರು | ಎಐನಲ್ಲಿ ಕ್ರಿಯೇಟ್‌ ಮಾಡಿರುವ ಚಿರತೆ ಫೋಟೋ ವೈರಲ್‌

ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…

27 mins ago

ಶಿವಮೊಗ್ಗದಲ್ಲಿ 8 ಮಂದಿಗೆ ಮಂಗನ ಕಾಯಿಲೆ ಪಾಸಿಟಿವ್‌: ಮನೆಮಾಡಿದ ಆತಂಕ

ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್‌ ಕೇಸ್‌ಗಳು ಮತ್ತಷ್ಟು…

1 hour ago

ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಿಷ್ಟು.!

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಸೋಮವಾರಪೇಟೆ ವಿದ್ಯುತ್‌ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್‌ ನಿರ್ವಹಣೆ ಕಾಮಗಾರಿ…

2 hours ago