ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಡಿಸೆಂಬರ್ ಅಂತ್ಯದವರೆಗೂ 3128 ಹಾಗೂ ಜನವರಿ ಕೊನೆಯವರೆಗೂ ದಿನನಿತ್ಯ 1030 ಕ್ಯೂಸೆಕ್ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚಿಸಿದೆ.
ಇನ್ನು ತಮಿಳುನಾಡಿನಲ್ಲಿ ಮಳೆಯಾಗುತ್ತಿದ್ದು, ಬೆಳೆಗೆ ಬೇಕಾದ ತೇವಾಂಶವಿದೆ ಹಾಗೂ ಕರ್ನಾಟಕದಲ್ಲಿ ಕುಡಿಯುವ ನೀರಿಗೂ ಕೊರತೆ ಉಂಟಾಗುವ ಪರಿಸ್ಥಿತಿ ಇದೆ ಎಂದು ಕರ್ನಾಟಕ ವಾದ ಮಂಡಿಸಿದರೂ ಸಹ ಕಾವೇರಿ ನೀರು ನಿಯಂತ್ರಣ ಸಮಿತಿ ತಮಿಳುನಾಡಿನ ಪರವೇ ಸೂಚನೆ ನೀಡಿದೆ.
ಕರ್ನಾಟಕದ ವಾದದಲ್ಲಿ ಏನೇನಿತ್ತು?
* ಡಿಸೆಂಬರ್ 18ರವರೆಗೂ ಕರ್ನಾಟಕದ 4 ಜಲಾಶಯಗಳಿಗೆ ಶೇ. 52.84ರಷ್ಟಿದೆ.
* ತಮಿಳುನಾಡಿದ ಕಾವೇರಿ ಜಲಾನಯನ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ನಲ್ಲಿ ಸಮತೋಲನ ಮಳೆಯನ್ನು ಕಾಣಬಹುದಾಗಿದೆ. ಆದ್ದರಿಂದ ಅಲ್ಲಿನ ಬೆಳೆಗಳಿಗೆ ಬೇಕಾದ ತೇವಾಂಶವಿದೆ.
* ತಮಿಳುನಾಡಿನ ಕುರುವಾಯಿ ಬೆಳೆ ಡಿಸೆಂಬರ್ ಮೊದಲ ವಾರದಲ್ಲಿಯೇ ಕಟಾವಾಗಿರುವುದರಿಂದ ಈ ಬೆಳೆಗಳಿಗೆ ನೀರಿನ ಅಗತ್ಯವಿಲ್ಲ.
* ಮಟ್ಟೂರು ಹಾಗೂ ಭವಾನಿ ಸಾಗರ ಜಲಾಶಯಗಳು 50.36 ಟಿಎಂಸಿ ನೀರನ್ನು ಹೊಂದಿದ್ದು, ಇದು ತಮಿಳುನಾಡಿಗೆ ಅಗತ್ಯಕ್ಕಿಂತ ಹೆಚ್ಚಿನದ್ದಾಗಿದೆ.
* ಕರ್ನಾಟಕದ ಜಲಾಶಯಗಳ ಒಳಹರಿವು ಸ್ಥಗಿತಗೊಂಡಿದ್ದು, ಯಾವುದೇ ಒಳಹರಿವಿನ ನಿರೀಕ್ಷೆಯಿಲ್ಲ. ಅಲ್ಲದೇ ಕರ್ನಾಟಕವು ಪ್ರಸ್ತುತ ಬೆಳೆದಿರುವ ಬೆಳೆಗಳಿಗೆ, ಕುಡಿಯುವ ನೀರಿಗೆ ಮತ್ತು ಕೈಗಾರಿಕೆಗಳಿಗೆ ಈಗಿರುವ ನೀರಿನ ಸಂಗ್ರಹದಿಂದ ನಿರ್ವಹಿಸಬೇಕಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…