BREAKING NEWS

ಮೋಚಾ ಚಂಡಮಾರುತ : ಕೇರಳಕ್ಕೆ ಯೆಲ್ಲೋ ಅಲರ್ಟ್​ ಇನ್ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಚಾ ಚಂಡಮಾರುತ ಅಪ್ಪಳಿಸಲಿರುವ ಕಾರಣ ಕೇರಳಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೇರಳ ಅಷ್ಟೇ ಅಲ್ಲದೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಟ್ಟನಂತಿಟ್ಟ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಹಳದಿ ಅಲರ್ಟ್​ ನೀಡಲಾಗಿದೆ.
ಮೇ 11 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಗಾಳಿ ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡವು ಬುಧವಾರ ಚಂಡಮಾರುತವಾಗಿ ಬದಲಾಗಲಿದೆ ಎಂದು ಐಎಂಡಿ ತಿಳಿಸಿದೆ.
ಮೋಚಾ ಚಂಡಮಾರುತವು 2023 ರಲ್ಲಿ ಭಾರತಕ್ಕೆ ಅಪ್ಪಳಿಸುವ ಮೊದಲ ಚಂಡಮಾರುತವಾಗಿದೆ ಮತ್ತು ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ಚಂಡಮಾರುತದ ಪರಿಣಾಮ ಸಮೀಪದ ರಾಜ್ಯಗಳಲ್ಲಿ ಕಾಣಬಹುದು ಎಂದು ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಈ ರಾಜ್ಯಗಳಲ್ಲಿ ಸಾಧಾರಣ ಮಳೆಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮತ್ತು ದೋಣಿ ನಿರ್ವಾಹಕರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರ, ಆಗ್ನೇಯ ಮತ್ತು ಸುತ್ತಮುತ್ತಲಿನ ಮಧ್ಯ ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರ ತೆರಳದಂತೆ ಸೂಚಿಸಲಾಗಿದೆ.
IMD ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಹಿಮಾಚಲ, ಉತ್ತರಾಖಂಡ ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಮಳೆ ಜೊತೆಗೆ ಹಿಮಪಾತವೂ ಆಗಬಹುದು ಎನ್ನಲಾಗಿದೆ. ಅದೇ ವೇಳೆ ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ, ಪಂಜಾಬ್, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ ಲಘು ಪ್ರಮಾಣದಲ್ಲಿ ಮಳೆಯಾಗಬಹುದು.
IMD ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ಮೋಡ ಕವಿದ ವಾತವರಣ ಇರಲಿದೆ. ಗರಿಷ್ಠ ತಾಪಮಾನವು ಸುಮಾರು 38 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು ಸುಮಾರು 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.
lokesh

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

10 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

10 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

10 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

10 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

10 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

10 hours ago