ಮ್ಯಾನ್ಮಾರ್ : ಮ್ಯಾನ್ಮಾರ್ನಲ್ಲಿ ಮೋಕಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿಯನ್ನು ಬಲಿಪಡೆದಿದೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿವೆ ಮತ್ತು ಗಂಟೆಗೆ 130 ಮೈಲುಗಳಷ್ಟು ವೇಗವಾಗಿ ಗಾಳಿ ಬೀಸಿತ್ತು. ಬುಮಾ ಮತ್ತು ಸಮೀಪದ ಖೌಂಗ್ ಡೋಕ್ ಗ್ರಾಮಗಳಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ರಾಖೈನ್ನ ರಾಜಧಾನಿ ಸಿಟ್ವೆಯ ಉತ್ತರದಲ್ಲಿರುವ ರಾಥೆಡಾಂಗ್ ಟೌನ್ಶಿಪ್ನ ಹಳ್ಳಿಯಲ್ಲಿ ಧಾರ್ಮಿಕ ಕಟ್ಟಡವೊಂದು ಕುಸಿದು 13 ಜನರು ಸಾವನ್ನಪ್ಪಿದ್ದಾರೆ ಮತ್ತು ಪಕ್ಕದ ಹಳ್ಳಿಯಲ್ಲಿ ಕಟ್ಟಡವೊಂದು ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸಿಟ್ವೆ ಸಮೀಪದ ಬು ಮಾ ಗ್ರಾಮದ ಮುಖ್ಯಸ್ಥ ಕಾರ್ಲೋ ಹೇಳಿದ್ದಾರೆ. ಇದೀಗ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೋಕಾ ಚಂಡಮಾರುತ ಮ್ಯಾನ್ಮಾರ್ ಪಶ್ಚಿಮ ಭಾಗದ ಕರಾವಳಿ ಹಾಗೂ ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ.
ತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್ಗೆ ಅಪ್ಪಳಿಸಿರುವ ಮೋಚಾ, ಭಾರತದ ಮಿಜೋರಾಂನಲ್ಲಿಯೂ ತೀವ್ರತರದ ಪರಿಣಾಮ ಉಂಟು ಮಾಡಿದೆ. 236ಕ್ಕೂ ಅಧಿಕ ಮನೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ನಿರಾಶ್ರಿತ ಶಿಬಿರಗಳಲ್ಲಿ ನೀರು ಆವರಿಸಿದ್ದು, ಜನರ ಪರಿಸ್ಥಿತಿ ಅತಂತ್ರವಾಗಿದೆ.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…