ಮ್ಯಾನ್ಮಾರ್ : ಮ್ಯಾನ್ಮಾರ್ನಲ್ಲಿ ಮೋಕಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿಯನ್ನು ಬಲಿಪಡೆದಿದೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿವೆ ಮತ್ತು ಗಂಟೆಗೆ 130 ಮೈಲುಗಳಷ್ಟು ವೇಗವಾಗಿ ಗಾಳಿ ಬೀಸಿತ್ತು. ಬುಮಾ ಮತ್ತು ಸಮೀಪದ ಖೌಂಗ್ ಡೋಕ್ ಗ್ರಾಮಗಳಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ರಾಖೈನ್ನ ರಾಜಧಾನಿ ಸಿಟ್ವೆಯ ಉತ್ತರದಲ್ಲಿರುವ ರಾಥೆಡಾಂಗ್ ಟೌನ್ಶಿಪ್ನ ಹಳ್ಳಿಯಲ್ಲಿ ಧಾರ್ಮಿಕ ಕಟ್ಟಡವೊಂದು ಕುಸಿದು 13 ಜನರು ಸಾವನ್ನಪ್ಪಿದ್ದಾರೆ ಮತ್ತು ಪಕ್ಕದ ಹಳ್ಳಿಯಲ್ಲಿ ಕಟ್ಟಡವೊಂದು ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸಿಟ್ವೆ ಸಮೀಪದ ಬು ಮಾ ಗ್ರಾಮದ ಮುಖ್ಯಸ್ಥ ಕಾರ್ಲೋ ಹೇಳಿದ್ದಾರೆ. ಇದೀಗ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೋಕಾ ಚಂಡಮಾರುತ ಮ್ಯಾನ್ಮಾರ್ ಪಶ್ಚಿಮ ಭಾಗದ ಕರಾವಳಿ ಹಾಗೂ ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ.
ತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್ಗೆ ಅಪ್ಪಳಿಸಿರುವ ಮೋಚಾ, ಭಾರತದ ಮಿಜೋರಾಂನಲ್ಲಿಯೂ ತೀವ್ರತರದ ಪರಿಣಾಮ ಉಂಟು ಮಾಡಿದೆ. 236ಕ್ಕೂ ಅಧಿಕ ಮನೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ನಿರಾಶ್ರಿತ ಶಿಬಿರಗಳಲ್ಲಿ ನೀರು ಆವರಿಸಿದ್ದು, ಜನರ ಪರಿಸ್ಥಿತಿ ಅತಂತ್ರವಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…