ಮ್ಯಾನ್ಮಾರ್ : ಮ್ಯಾನ್ಮಾರ್ನಲ್ಲಿ ಮೋಕಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿಯನ್ನು ಬಲಿಪಡೆದಿದೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿವೆ ಮತ್ತು ಗಂಟೆಗೆ 130 ಮೈಲುಗಳಷ್ಟು ವೇಗವಾಗಿ ಗಾಳಿ ಬೀಸಿತ್ತು. ಬುಮಾ ಮತ್ತು ಸಮೀಪದ ಖೌಂಗ್ ಡೋಕ್ ಗ್ರಾಮಗಳಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ರಾಖೈನ್ನ ರಾಜಧಾನಿ ಸಿಟ್ವೆಯ ಉತ್ತರದಲ್ಲಿರುವ ರಾಥೆಡಾಂಗ್ ಟೌನ್ಶಿಪ್ನ ಹಳ್ಳಿಯಲ್ಲಿ ಧಾರ್ಮಿಕ ಕಟ್ಟಡವೊಂದು ಕುಸಿದು 13 ಜನರು ಸಾವನ್ನಪ್ಪಿದ್ದಾರೆ ಮತ್ತು ಪಕ್ಕದ ಹಳ್ಳಿಯಲ್ಲಿ ಕಟ್ಟಡವೊಂದು ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸಿಟ್ವೆ ಸಮೀಪದ ಬು ಮಾ ಗ್ರಾಮದ ಮುಖ್ಯಸ್ಥ ಕಾರ್ಲೋ ಹೇಳಿದ್ದಾರೆ. ಇದೀಗ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೋಕಾ ಚಂಡಮಾರುತ ಮ್ಯಾನ್ಮಾರ್ ಪಶ್ಚಿಮ ಭಾಗದ ಕರಾವಳಿ ಹಾಗೂ ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ.
ತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್ಗೆ ಅಪ್ಪಳಿಸಿರುವ ಮೋಚಾ, ಭಾರತದ ಮಿಜೋರಾಂನಲ್ಲಿಯೂ ತೀವ್ರತರದ ಪರಿಣಾಮ ಉಂಟು ಮಾಡಿದೆ. 236ಕ್ಕೂ ಅಧಿಕ ಮನೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ನಿರಾಶ್ರಿತ ಶಿಬಿರಗಳಲ್ಲಿ ನೀರು ಆವರಿಸಿದ್ದು, ಜನರ ಪರಿಸ್ಥಿತಿ ಅತಂತ್ರವಾಗಿದೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…