ಮ್ಯಾನ್ಮಾರ್ : ಮ್ಯಾನ್ಮಾರ್ನಲ್ಲಿ ಮೋಕಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿಯನ್ನು ಬಲಿಪಡೆದಿದೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿವೆ ಮತ್ತು ಗಂಟೆಗೆ 130 ಮೈಲುಗಳಷ್ಟು ವೇಗವಾಗಿ ಗಾಳಿ ಬೀಸಿತ್ತು. ಬುಮಾ ಮತ್ತು ಸಮೀಪದ ಖೌಂಗ್ ಡೋಕ್ ಗ್ರಾಮಗಳಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ರಾಖೈನ್ನ ರಾಜಧಾನಿ ಸಿಟ್ವೆಯ ಉತ್ತರದಲ್ಲಿರುವ ರಾಥೆಡಾಂಗ್ ಟೌನ್ಶಿಪ್ನ ಹಳ್ಳಿಯಲ್ಲಿ ಧಾರ್ಮಿಕ ಕಟ್ಟಡವೊಂದು ಕುಸಿದು 13 ಜನರು ಸಾವನ್ನಪ್ಪಿದ್ದಾರೆ ಮತ್ತು ಪಕ್ಕದ ಹಳ್ಳಿಯಲ್ಲಿ ಕಟ್ಟಡವೊಂದು ಕುಸಿದು ಮಹಿಳೆ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸಿಟ್ವೆ ಸಮೀಪದ ಬು ಮಾ ಗ್ರಾಮದ ಮುಖ್ಯಸ್ಥ ಕಾರ್ಲೋ ಹೇಳಿದ್ದಾರೆ. ಇದೀಗ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಮೋಕಾ ಚಂಡಮಾರುತ ಮ್ಯಾನ್ಮಾರ್ ಪಶ್ಚಿಮ ಭಾಗದ ಕರಾವಳಿ ಹಾಗೂ ಬಾಂಗ್ಲಾದೇಶಕ್ಕೆ ಅಪ್ಪಳಿಸಿದ್ದು, ಭಾರಿ ಅವಾಂತರವನ್ನೇ ಸೃಷ್ಟಿ ಮಾಡಿದೆ.
ತ್ತೊಂದೆಡೆ ಬಾಂಗ್ಲಾ-ಮ್ಯಾನ್ಮಾರ್ಗೆ ಅಪ್ಪಳಿಸಿರುವ ಮೋಚಾ, ಭಾರತದ ಮಿಜೋರಾಂನಲ್ಲಿಯೂ ತೀವ್ರತರದ ಪರಿಣಾಮ ಉಂಟು ಮಾಡಿದೆ. 236ಕ್ಕೂ ಅಧಿಕ ಮನೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ನಿರಾಶ್ರಿತ ಶಿಬಿರಗಳಲ್ಲಿ ನೀರು ಆವರಿಸಿದ್ದು, ಜನರ ಪರಿಸ್ಥಿತಿ ಅತಂತ್ರವಾಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…