ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮೋಖಾ (Mocha) ಚಂಡಮಾರುತ ಅತ್ಯಂತ ತೀವ್ರ ಸ್ವರೂಪ (Very Severe Cyclonic Storm) ತಾಳಿದ್ದು, ಮುಂಜಾಗ್ರತಾ ಕ್ರಮವಾಗಿ ಬಂಗಾಳದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಅಂಡಮಾನ್ ಮತ್ತು ನಿಕೋಬಾರ್ ನ ಪೋರ್ಟ್ ಬ್ಲೇರ್ನಿಂದ 520 ಕಿ.ಮೀ. ದೂರದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಖಾ ಚಂಡಮಾರುತ ಇಂದು ಬೆಳಿಗ್ಗೆ (ಶುಕ್ರವಾರ) 5.30ರ ಸುಮಾರಿಗೆ ತೀವ್ರ ಸ್ವರೂಪದಿಂದ ಅತ್ಯಂತ ತೀವ್ರ ಸ್ವರೂಪ ತಾಳಿರುವುದಾಗಿ ಟ್ವೀಟ್ ಮೂಲಕ ತಿಳಿಸಿದೆ.
ಮುಂಜಾಗ್ರತಾ ಕ್ರಮವಾಗಿ ಬಂಗಾಳದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರತದ ಪಶ್ಚಿಮ ಕರಾವಳಿಯಲ್ಲಿ ಚಂಡಮಾರುತದ ಪ್ರಭಾವ ಉಂಟಾಗುವ ಭೀತಿ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ದೀಘಾದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯು (ಎನ್ಡಿಆರ್ಎಫ್) ಎಂಟು ತಂಡಗಳಲ್ಲಾಗಿ 200 ಸಿಬ್ಬಂದಿ ನಿಯೋಜಿಸಿದೆ. ಭಾನುವಾರದವರೆಗೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಸಲಾಗಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಭಾರಿ ಗಾಳಿ, ಮಳೆಯಾಗುವ ಸಾಧ್ಯತೆಯಿದೆ. ಮೋಖಾ ಚಂಡಮಾರುತ ಮೇ 14ರ ವೇಳೆಗೆ ಬಾಂಗ್ಲಾದೇಶ ಹಾಗೂ ಮ್ಯಾನ್ಮಾರ್ಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಹವಾಮಾನ ವೈಪರೀತ್ಯದಿಂದಾಗಿ ಶನಿವಾರದಂದು ತ್ರಿಪುರಾ ಮತ್ತು ಮಿಜೋರಾಂನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಭಾನುವಾರದಂದು ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂನಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…