BREAKING NEWS

ಇಂದು ಸಂಜೆ ಅಪ್ಪಳಿಸಲಿದೆ ಸೈಕ್ಲೋನ್‌ : 74 ಸಾವಿರ ಮಂದಿ ಸ್ಥಳಾಂತರ

ನವದೆಹಲಿ : ಉಗ್ರಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿರುವ ಬಿಪರ್‌ಜಾಯ್‌ ಚಂಡಮಾರುತ ಇಂದು ಸಂಜೆ ಗುಜರಾತ್‍ನ ಕಛ್ ತೀರಕ್ಕೆ ಅಪ್ಪಳಿಸಲಿದೆ.

ಸಂಜೆ 4 ಮತ್ತು ರಾತ್ರಿ 8 ಗಂಟೆಯ ಒಳಗಡೆ ಚಂಡಮಾರುತ ಕಛ್‌ ತೀರಕ್ಕೆ ಅಪ್ಪಳಿಸಿ ಪಾಕಿಸ್ತಾನದ ಕಡೆಗೆ ಸಾಗಲಿದೆ. ಕಳೆದ 58 ವರ್ಷಗಳಲ್ಲೇ ಜೂನ್ ತಿಂಗಳಲ್ಲಿ ಕಾಣಿಸಿಕೊಳ್ಳುತ್ತಿರುವ ದೊಡ್ಡ ಚಂಡಮಾರುತ ಇದಾಗಿದ್ದು ಅರಬ್ಬಿ ಸಮುದ್ರದ ಸಮೀಪದ ಪ್ರದೇಶಗಳಲ್ಲಿ ಭಾರೀ ಅನಾಹುತ ಸೃಷ್ಟಿಸಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದಾರೆ.

ಗುಜರಾತ್‍ನ ಸೌರಾಷ್ಟ್ರ, ಕಛ್, ಜಾಮ್‍ನಗರ, ದ್ವಾರಕಾ ಸೇರಿ 8 ಜಿಲ್ಲೆಗಳಿಗೆ ಹೈಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಮುದ್ರ ತೀರದಿಂದ 10 ಕಿ.ಮೀ. ಅಂತರದಲ್ಲಿನ ಸುಮಾರು 74 ಸಾವಿರ ಮಂದಿಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲಾಗಿದೆ.

ಪಶ್ಚಿಮ ರೈಲ್ವೇ 76 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಗಾಳಿಯ ವೇಗ ಗಂಟೆಗೆ 125 ರಿಂದ 150 ಕಿ.ಮೀ ಇರಲಿದ್ದು, ಪ್ರವಾಹ ಪರಿಸ್ಥಿತಿಯೂ ಎದುರಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

18 ಎನ್‍ಡಿಆರ್‌ಎಫ್,12 ಎಸ್‌ಡಿಆರ್‌ಎಫ್‌, 115 ರಾಜ್ಯ ರಸ್ತೆ ಹಾಗೂ ನಿರ್ಮಾಣ ಕೇಂದ್ರ ತಂಡಗಳು, 397 ವಿದ್ಯುತ್‌ ಇಲಾಖೆಯ ತಂಡಗಳನ್ನು ರಕ್ಷಣಾ ಕೆಲಸಕ್ಕೆ ನಿಯೋಜಿಸಲಾಗಿದೆ. ವಾಯುಪಡೆ, ನೌಕಾಪಡೆಗೆ ಯಾವುದಕ್ಕೂ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ.

ಬಿರುಗಾಳಿಯಿಂದ ಈಗಾಗಲೇ ಗುಜರಾತ್‌ ತೀರದ ಹಲವೆಡೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ಮೊಬೈಲ್‌ ಹಾಗೂ ಸ್ಥಿರ ದೂರವಾಣಿಯಲ್ಲಿ ಸಂಪರ್ಕ ವ್ಯತ್ಯಯವಾಗಲಿರುವ ಕಾರಣ ರಕ್ಷಣಾ ತಂಡಗಳಿಗೆ ಸ್ಯಾಟಲೈಟ್‌ ಫೋನ್‌ಗಳನ್ನು ನೀಡಲಾಗಿದೆ. ಶಾಲೆ ಮತ್ತು ಇತರ ಸಭಾಭವನದಂತಹ ದೊಡ್ಡ ಕಟ್ಟಡಗಳಲ್ಲಿ ತಾತ್ಕಾಲಿಕ ಆಶ್ರಯ ಶಿಬಿರ ನಿರ್ಮಾಣ ಮಾಡಲಾಗಿದೆ.

ಚಂಡಮಾರುತರದಿಂದ ಸಮುದ್ರ ಪ್ರಕ್ಷುಬ್ಧವಾಗಿದು ಸೌರಾಷ್ಟ್ರ ಮತ್ತು ಕಛ್‌ ತೀರದಲ್ಲಿ 6 ಅಡಿ ಎತ್ತರದ ಅಲೆಗಳು ಏಳಲು ಆರಂಭಿಸಿದೆ. ಇಂದು ಅಲೆಗಳ ಎತ್ತರ 9 ಅಡಿಗೆ ಹೋಗಬಹುದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಗುಜರಾತ್ ಜೊತೆಗೆ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ತೀರದ ಮೇಲೂ ನಿಗಾ ಇಡಲಾಗಿದೆ.

lokesh

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

39 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago