ಬೆಂಗಳೂರು : ಬೆಂಗಳೂರಿನಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ 8 ಮನೆಗಳು ಬೆಂಕಿಗಾಹುತಿಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ವಿನಾಯಕ ಚಿತ್ರಮಂದಿರ ಬಳಿ ಇರುವ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಗೋದಾಮು ಹಾಗೂ 8 ಶೀಟ್ ಮನೆಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ವಿಷಯ ತಿಳಿದು ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಗೋದಾಮಿನಲ್ಲಿ ಎರಡು ಸಿಲಿಂಡರ್ ಗಳು ಸ್ಫೋಟಗೊಂಡು ಅಗ್ನಿ ದುರಂತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಗ್ನಿ ಅವಘಡದಲ್ಲಿ ಗಾಯೊಂಡಿರುವ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ತಿಳಿದುಬಂದಿದೆ.
ಸಾಕೆಟ್ ಬೋರ್ಡ್ ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಮಹಿಳೆಯರು ಬೆಂಕಿ ಹೊತ್ತಿದ್ದ ಬಗ್ಗೆ ಮನೆಯಿಂದ ಹೊರಗೆ ಓಡಿ ಬಂದು ನನಗೆ ಮಾಹಿತಿ ನೀಡಿದರು. ಅಷ್ಟರಲ್ಲಿ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟದ ಜೊತೆ ಬೆಂಕಿ ಹರಡಿತ್ತು. ತಕ್ಷಣ ಅಗ್ನಿಶಾಮಕ ಕಚೇರಿಗೆ ಕರೆ ಮಾಡಿ ಮಾಹಿತಿ ನೀಡಿದೆ. ಎಲ್ಲರೂ ಹೊರಗೆ ಓಡಿ ಬಂದಿದ್ದರಿಂದ ಯಾರಿಗೂ ಗಾಯಗಳಾಗಿಲ್ಲ ಎಂದು ಮಾಹಿತಿ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…