BREAKING NEWS

ರಹಸ್ಯ ಸ್ಥಳದಲ್ಲಿ ಮುಂದುವರೆದ ಡಿ.ಕೆ.ಶಿ ಆಪರೇಷನ್ ಹಸ್ತ

ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ರಹಸ್ಯ ಸ್ಥಳದಲ್ಲಿ ಕುಳಿತು ಆಪರೇಷನ್ ಹಸ್ತ ಕಾರ್ಯಚರಣೆಯನ್ನು ಚುರುಕುಗೊಳಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಸಿಗದವರು ಅಸಮಧಾನಗೊಂಡು ಅನ್ಯ ಪಕ್ಷಗಳತ್ತ ಮುಖ ಮಾಡಿದ್ದಾರೆ. ಕೆಲವು ಮಾಜಿ ಶಾಸಕರು ಈಗಾಗಲೇ ಜೆಡಿಎಸ್ ಸೇರಿದ್ದಾರೆ. ಇನ್ನೂ ಕೆಲವು ಪ್ರಭಾವಿ ನಾಯಕರು ಬಿಜೆಪಿಯಲ್ಲಿ ಟಿಕೆಟ್ ದೊರೆಯದೆ ಅಸಮಾಧಾನಗೊಂಡು ಪಕ್ಷೇತರರಾಗಿ ಕಣಕ್ಕಿಳಿಯುವ ಘೋಷಣೆ ಮಾಡಿದ್ದಾರೆ.

ಬೆಂಗಳೂರು ಸೇರಿದಂತೆ ಕಾಂಗ್ರೆಸ್ ರಾಜ್ಯದ ಕೆಲವು ಮಹತ್ವದ ಕ್ಷೇತ್ರಗಳಿಗೆ ತನ್ನ ಹುರಿಯಾಳುಗಳನ್ನು ಪ್ರಕಟಿಸಿಲ್ಲ. ಕಿತ್ತೂರು ಕರ್ನಾಟಕದ ಹುಬ್ಬಳ್ಳಿ-ಧಾರವಾಡ ಕೇಂದ್ರ ಮತ್ತು ಪಶ್ಚಿಮ ಕ್ಷೇತ್ರ ಸೇರಿ ಹಲವು ಕಡೆ ಪ್ರಬಲ ಅಭ್ಯರ್ಥಿಗಳ ಆಯ್ಕೆಗೆ ಚರ್ಚೆ ನಡೆಯುತ್ತಿದೆ. ಉತ್ತರ ಕರ್ನಾಟಕ ಭಾಗದ ಬಿಜೆಪಿ ಭದ್ರಕೋಟೆಯನ್ನು ಛೇದಿಸಲು ವ್ಯೂಹ ರಚಿಸಿರುವ ಡಿ.ಕೆ.ಶಿವಕುಮಾರ್ ಪ್ರಭಾವಿ ನಾಯಕರಿಗೆ ಗಾಳ ಹಾಕಿದೆ.

ಇತರ ಪಕ್ಷಗಳಿಂದ ಪ್ರಭಾವಿಗಳೇ ಬಿಜೆಪಿ ಸೇರುತ್ತಾರೆ ಕಾದು ನೋಡಿ ಎಂದು ಡಿ.ಕೆ.ಶಿವಕುಮಾರ್ ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ತಮ್ಮ ಅಂಗರಕ್ಷಕರನ್ನು ಬಿಟ್ಟು ರಹಸ್ಯ ಸ್ಥಳಕ್ಕೆ ತೆರಳಿದ್ದರು.
ಬಾಕಿ ಇರುವ 58 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಹಾಗೂ ಬಿಜೆಪಿ ಮತ್ತು ಜೆಡಿಎಸ್‍ನ ಪ್ರಭಾವಿ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ. ಕೆಲವು ನಾಯಕರು ಕಾಂಗ್ರೆಸ್‍ಗೆ ಬರಲು ಹಿಂದೇಟು ಹಾಕಿದರೆ ಅಂತಹ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವವರಿಗೆ ಬೆಂಬಲ ಘೋಷಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ.

ಮುಂದಿನ ದಿನಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ ಪಕ್ಷೇತರಾಗಿ ಆಯ್ಕೆಯಾದವರ ಬೆಂಬಲ ಕಾಂಗ್ರೆಸ್‍ಗೆ ಪ್ರಯೋಜನಕಾರಿಯಾಗಬಹುದು ಎಂಬ ಲೆಕ್ಕಾಚಾರಗಳೂ ಪಕ್ಷದಲ್ಲಿ ನಡೆಯುತ್ತಿವೆ. ಬಿಜೆಪಿಯಲ್ಲಿದ್ದ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ನಿನ್ನೆ ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲಾಗಿದೆ. ಮುಂದುವರೆದು ಪ್ರಭಾವಿ ನಾಯಕರನ್ನು ಸೆಳೆಯಲು ಡಿ.ಕೆ.ಶಿವಕುಮಾರ್ ತಂತ್ರಗಾರಿಕೆ ನಡೆಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಐದು ದಿನಗಳು ಬಾಕಿ ಇವೆ. ಅಷ್ಟರಲ್ಲಿ ಎಷ್ಟು ಮಂದಿ ಸಾಧ್ಯವೋ ಅಷ್ಟು ಜನರನ್ನು ಕಾಂಗ್ರೆಸ್‍ಗೆ ಸೆಳೆಯಲು ಯತ್ನಗಳು ನಡೆಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮತ್ತು ಅನ್ಯ ಪಕ್ಷಗಳ ಅಸಮಧಾನಿತರ ಜೊತೆ ಸಂಪರ್ಕ ನಡೆಸುತ್ತಿದ್ದಾರೆ. ಇಂದು ಸಂಜೆ ಅಥವಾ ನಾಳೆಯಲ್ಲಿ ಮತ್ತಷ್ಟು ಪ್ರಭಾವಿಗಳು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ದೇವನಹಳ್ಳಿಯ ಮಾಜಿ ಶಾಸಕ ವೆಂಕಟಸ್ವಾಮಿ ನಿಧನದ ಹಿನ್ನೆಲೆಯಲ್ಲಿ ಅಲ್ಲಿಗೆ ತೆರಳಿ ಅಂತಿಮ ದರ್ಶನ ಪಡೆದಿದ್ದು, ಮತ್ತೆ ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

lokesh

Recent Posts

ರಾಮಕೃಷ್ಣನಗರ ಉದ್ಯಾನ: ಸಂಪೂರ್ಣ ಅಧ್ವಾನ!

ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್‌ಗೆ…

37 seconds ago

ಜೂಜಾಟ, ಮದ್ಯ ಅಕ್ರಮ ಮಾರಾಟಕ್ಕೆ ಲಕ್ಷ  ರೂ. ದಂಡ!

ಗುಂಡ್ಲುಪೇಟೆ: ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಯುವಕರು, ವಯಸ್ಕರು ಮದ್ಯ ವ್ಯಸನ ಹಾಗೂ ಜೂಜಾಟಗಳಿಗೆ ಬಲಿಯಾಗುತ್ತಿರುವುದು ಹೆಚ್ಚಾಗುತ್ತಿದ್ದು ಹಾಗೂ ಅಶಾಂತಿಗೆ…

10 mins ago

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

7 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

10 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

11 hours ago